ಕಳ್ಳತನ ಮಾಡಲು ಬಂದು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಖದೀಮ

ಬೆಂಗಳೂರು: ಕಳ್ಳತನ ಮಾಡಲು ಬಂದು ಮನೆಯವರ ಬಳಿಯೇ ರೆಡ್​ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿರುವ ಘಟನೆ ಜೆ.ಪಿ.ನಗರದ ನಾರಾಯಣ ಶಾಲೆ ಬಳಿ ನಡೆದಿದೆ. ಇಂದು ಮುಂಜಾನೆ ಮನೆಯೊಂದರ ಕಿಟಕಿ ಮೂಲಕ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಕದ್ದು ನೋಡ್ತಿದ್ದ. ಇದನ್ನು ತಿಳಿದ ಮನೆಯವರು ವ್ಯಕ್ತಿಯ ಕೈಯನ್ನು ಕಿಟಕಿಯಿಂದ ಎಳೆದು ಕಟ್ಟಿ ಹಾಕಿದ್ದಾರೆ. ಕಿಟಕಿ ಬಳಿ ಏನು ಮಾಡುತಿದ್ದೀಯಾ ಎಂಬ ಪ್ರಶ್ನೆಗೆ ತನಗೆ ಯಾರೋ ಹಿಂಬಾಲಿಸಿಕೊಂಡು ಬಂದರು ಅದಕ್ಕೆ ಕಿಟಕಿ ಹತ್ತಿದ್ದೇನೆ ಎಂದು ಆ ವ್ಯಕ್ತಿ ಉತ್ತರಿಸಿದ್ದಾನೆ. ಆ ವ್ಯಕ್ತಿ ಮೇಲ್ನೋಟಕ್ಕೆ ಮಾನಸಿಕ […]

ಕಳ್ಳತನ ಮಾಡಲು ಬಂದು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಖದೀಮ
ಸಾಧು ಶ್ರೀನಾಥ್​

Updated on: Feb 22, 2020 | 9:28 AM

ಬೆಂಗಳೂರು: ಕಳ್ಳತನ ಮಾಡಲು ಬಂದು ಮನೆಯವರ ಬಳಿಯೇ ರೆಡ್​ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿರುವ ಘಟನೆ ಜೆ.ಪಿ.ನಗರದ ನಾರಾಯಣ ಶಾಲೆ ಬಳಿ ನಡೆದಿದೆ. ಇಂದು ಮುಂಜಾನೆ ಮನೆಯೊಂದರ ಕಿಟಕಿ ಮೂಲಕ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಕದ್ದು ನೋಡ್ತಿದ್ದ. ಇದನ್ನು ತಿಳಿದ ಮನೆಯವರು ವ್ಯಕ್ತಿಯ ಕೈಯನ್ನು ಕಿಟಕಿಯಿಂದ ಎಳೆದು ಕಟ್ಟಿ ಹಾಕಿದ್ದಾರೆ.

ಕಿಟಕಿ ಬಳಿ ಏನು ಮಾಡುತಿದ್ದೀಯಾ ಎಂಬ ಪ್ರಶ್ನೆಗೆ ತನಗೆ ಯಾರೋ ಹಿಂಬಾಲಿಸಿಕೊಂಡು ಬಂದರು ಅದಕ್ಕೆ ಕಿಟಕಿ ಹತ್ತಿದ್ದೇನೆ ಎಂದು ಆ ವ್ಯಕ್ತಿ ಉತ್ತರಿಸಿದ್ದಾನೆ. ಆ ವ್ಯಕ್ತಿ ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದು, ಸದ್ಯ ಅಗ್ನಿಶಾಮಕ ದಳ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಆತನ್ನು ಕಿಟಕಿಯಿಂದ ಕೆಳಗೆ ಇಳಿಸಿದ್ದಾರೆ. ನಂತರ ಪುಟ್ಟೇನಹಳ್ಳಿ ಪೊಲೀಸರು ಆತನನ್ನ ಠಾಣೆಗೆ ಕರೆದೊಯ್ದಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us