ಬಂಧಿಸಲು ಬಂದಿದ್ದ ಪೊಲೀಸರ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಕೊರೊನಾಗೆ ಬಲಿ, ಯಾರವನು?

ಗದಗ: ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಬಂದಿದ್ದ ಪೊಲೀಸರ ಬೈಕಿಗೇ ಬೆಂಕಿ ಹಚ್ಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಆರೋಪಿ ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನಾರಾಯಣಪುರ ಗ್ರಾಮದ ಸಂತೋಷ್ ಕೊರೊನಾ ಸೋಂಕಿಗಗೆ ಬಲಿಯಾಗಿರುವ ಆರೋಪಿಯಾಗಿದ್ದು, ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 6 ರಂದು ಗದಗದ ಶಹರ ಪೊಲೀಸರು ನಾರಾಯಣಪುರ ಗ್ರಾಮಕ್ಕೆ ಅರೆಸ್ಟ್ ಮಾಡಲು ಬಂದಿದ್ದ ಪೊಲೀಸರಿಗೆ ಕೈಗೆ ಸಿಗದಂತೆ ಹೊಲದ ತುಂಬೆಲ್ಲಾ […]

ಬಂಧಿಸಲು ಬಂದಿದ್ದ ಪೊಲೀಸರ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಕೊರೊನಾಗೆ ಬಲಿ, ಯಾರವನು?
ಸಾಧು ಶ್ರೀನಾಥ್​

Updated on: Aug 10, 2020 | 7:20 PM

ಗದಗ: ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಬಂದಿದ್ದ ಪೊಲೀಸರ ಬೈಕಿಗೇ ಬೆಂಕಿ ಹಚ್ಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಆರೋಪಿ ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ನಾರಾಯಣಪುರ ಗ್ರಾಮದ ಸಂತೋಷ್ ಕೊರೊನಾ ಸೋಂಕಿಗಗೆ ಬಲಿಯಾಗಿರುವ ಆರೋಪಿಯಾಗಿದ್ದು, ಚೂರಿ ಇರಿತ ಹಾಗೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 6 ರಂದು ಗದಗದ ಶಹರ ಪೊಲೀಸರು ನಾರಾಯಣಪುರ ಗ್ರಾಮಕ್ಕೆ ಅರೆಸ್ಟ್ ಮಾಡಲು ಬಂದಿದ್ದ ಪೊಲೀಸರಿಗೆ ಕೈಗೆ ಸಿಗದಂತೆ ಹೊಲದ ತುಂಬೆಲ್ಲಾ ಓಡಾಡಿ ಗ್ರಾಮಕ್ಕೆ ಬಂದಿದ್ದಾನೆ.

ಆಗ ಅರೆಸ್ಟ್ ಮಾಡೋಕೆ ಬಂದಿದ್ದ ಪೊಲೀಸರ ಬೈಕ್ ಕಾಣಿಸಿವೆ. ಈ ನಟೋರಿಯಸ್ ಪೊಲೀಸರ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ. ನಂತರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ರಿಂದ ಆಗಸ್ಟ್ 8 ರಂದು ಗ್ರಾಮೀಣ ಪೊಲೀಸರು ಹರಸಹಾಸ ಪಟ್ಟು ಬಂಧಿಸಿದ್ದಾರೆ.

ಆಗಸ್ಟ್ 7ರಂದು ಸಂತೋಷವನ್ನು ಬಂಧಿಸಿದ್ದ ಪೊಲೀಸರು ಆತನನ್ನು ನ್ಯಾಯಾಲಕ್ಕೆ ಒಪ್ಪಿಸುವ ಮುನ್ನವೇ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ನಲ್ಲಿ ವರದಿ ಪಾಸಿಟಿವ್ ಬಂದಿದ್ದರಿಂದ ಆತನನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಸೇರಿಸಲಾಗಿತ್ತು.

ಆದರೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಂತೋಷ್, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಆರೋಪಿ ಸಾವನ್ನಪ್ಪಿದ್ದರಿಂದ ಆತನನ್ನು ಬಂಧಿಸಿದ್ದ ಪೊಲೀಸರಿಗೆ ಕೊರೊನಾ ಆತಂಕ ಶುರುವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us