AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೊಬೆಷನರಿ PSIಗೆ ಆವಾಜ್ ಹಾಕಿದ್ದ ಬಿಜೆಪಿ ಜಿಲ್ಲಾಧ್ಯಕ್ಷನಿಗೆ ಮುಂದೇನಾಯ್ತು?

ಮಂಡ್ಯ: ಕೊರೊನಾ ವಿರುದ್ಧ ಹೋರಾಡಲು ತಮ್ಮ ಮನೆ ಮಠಗಳ ಬಗ್ಗೆ ಯೋಚಿಸದೆ ಹಗಲು ರಾತ್ರಿ ಎನ್ನದೆ ದುಡಿಯುತ್ತಿರುವ ಕೊರೊನಾ ವಾರಿಯಸ್ ಮೇಲಿನ ದರ್ಪ ಮುಂದುವರೆದಿದೆ. ಮಂಡ್ಯ ಜಿಲ್ಲೆ ಕೆಆರ್‌ಪೇಟೆಯ ಪ್ರೊಷನರಿ ಪಿಎಸ್‌ಐ ಮೇಲೆ ದೌರ್ಜನ್ಯ ಮಾಡಿದ್ದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಆಗಿದ್ದಾರೆ. ಹಿನ್ನೆಲೆ: ವಾಹನ ತಪಾಸಣೆ ವೇಳೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಆರ್.ಪೇಟೆಯಲ್ಲಿ ಪ್ರೊಬೆಷನರಿ PSI ನಿಖಿತಾಗೆ ಆವಾಜ್ ಹಾಕಿದ್ದರು. ಸಂಜೆ 7 ಗಂಟೆಯಲ್ಲಿ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಕಾರಿನಲ್ಲಿ […]

ಪ್ರೊಬೆಷನರಿ PSIಗೆ ಆವಾಜ್ ಹಾಕಿದ್ದ ಬಿಜೆಪಿ ಜಿಲ್ಲಾಧ್ಯಕ್ಷನಿಗೆ ಮುಂದೇನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 07, 2020 | 10:30 AM

Share

ಮಂಡ್ಯ: ಕೊರೊನಾ ವಿರುದ್ಧ ಹೋರಾಡಲು ತಮ್ಮ ಮನೆ ಮಠಗಳ ಬಗ್ಗೆ ಯೋಚಿಸದೆ ಹಗಲು ರಾತ್ರಿ ಎನ್ನದೆ ದುಡಿಯುತ್ತಿರುವ ಕೊರೊನಾ ವಾರಿಯಸ್ ಮೇಲಿನ ದರ್ಪ ಮುಂದುವರೆದಿದೆ. ಮಂಡ್ಯ ಜಿಲ್ಲೆ ಕೆಆರ್‌ಪೇಟೆಯ ಪ್ರೊಷನರಿ ಪಿಎಸ್‌ಐ ಮೇಲೆ ದೌರ್ಜನ್ಯ ಮಾಡಿದ್ದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಆಗಿದ್ದಾರೆ.

ಹಿನ್ನೆಲೆ: ವಾಹನ ತಪಾಸಣೆ ವೇಳೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಆರ್.ಪೇಟೆಯಲ್ಲಿ ಪ್ರೊಬೆಷನರಿ PSI ನಿಖಿತಾಗೆ ಆವಾಜ್ ಹಾಕಿದ್ದರು. ಸಂಜೆ 7 ಗಂಟೆಯಲ್ಲಿ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ 7 ಗಂಟೆ ನಂತರ ನಿಷೇಧಾಜ್ಞೆ ಇರುವುದರಿಂದ ಸಂಚರಿಸಬಾರದೆಂದು PSI ನಿಖಿತಾ ಸೂಚಿಸಿದ್ರು. ಈ ಮಾತಿಗೆ ಗರಂ ಆದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊಬೆಷನರಿ ಪಿಎಸ್‌ಐ ನಿಖಿತಾಗೆ ಆವಾಜ್ ಹಾಕಿದ್ರು.

ನಾನು ಬಿಜೆಪಿ ಜಿಲ್ಲಾಧ್ಯಕ್ಷ, ನನ್ನನ್ನು ನೀನು ಕೇಳುವಂತಿಲ್ಲ. ನಿನ್ನದು ಅತಿಯಾಗುತ್ತಿದೆ, ನೀನು ಇನ್ನೂ ಪಿಎಸ್‌ಐ ಆಗಿಲ್ಲ. ನೀನು ಇನ್ನೂ ಪ್ರೊಬೆಷನರಿ ಪಿಎಸ್‌ಐ ಅಷ್ಟೇ. ನಾನು ಸಿಎಂ, ಡಿಸಿಎಂ, ಡಿಸಿ, SPಗೆ ಕಾಲ್ ಮಾಡುತ್ತೇನೆ. ನೀನು ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ದೂರು ನೀಡ್ತೀನಿ. ನಿನನ್ನ ಕೆಲಸದಿಂದ‌ ತೆಗೆಸುತ್ತೇನೆ ಎಂದು ಆವಾಜ್ ಹಾಕಿದ್ರು ಎಂಬ ಆರೋಪ ಕೇಳಿ ಬಂದಿತ್ತು.

ನಿಖಿತಾ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಟೌನ್ ಠಾಣೆಯಲ್ಲಿ ವಿಜಯ್‌ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಸ್ಟೇಷನ್ ಬೇಲ್ ಮೇಲೆ ವಿಜಯ್‌ಕುಮಾರ್ ರಿಲೀಸ್ ಆಗಿದ್ದಾರೆ. ಕೊರೊನಾ ವಾರಿಯಸ್ ಮೇಲೆ ದೌರ್ಜನ್ಯ ಮಾಡೋ ರಾಜಕೀಯ ಪುಂಡರಿಗೆ ಜೈಲು ಶಿಕ್ಷೆ ಅಲ್ಲ, ಸ್ಟೇಷನ್ ಬೇಲ್ ಸಿಗುತ್ತೆ.

Published On - 8:20 am, Thu, 7 May 20

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!