AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಯಶ್ಚಿತ್ತ ಉತ್ಸವ ಮಾಡಿದ ಬಳಿಕವೇ ವೈರಮುಡಿ ಉತ್ಸವ ಮಾಡಲು ಮಂಡ್ಯ ಜಿಲ್ಲಾಡಳಿತ ನಿರ್ಧಾರ

ಪುರಾತನ ಕಾಲದಿಂದಲೂ ವೈರಮುಡಿ ಉತ್ಸವ ಆಚರಿಸಲಾಗ್ತಿದೆ. ಕಳೆದ ಬಾರಿ ವೈರಮುಡಿ ಉತ್ಸವವನ್ನು ಆಚರಿಸದ ಹಿನ್ನೆಲೆಯಲ್ಲಿ ಈ ಬಾರಿ ಕಳಸ ಪೂಜೆ ಸೇರಿ 3 ದಿನಗಳ ಕಾಲ ಪ್ರಾಯಶ್ಚಿತ್ತ ಉತ್ಸವ ಮಾಡಲಾಗುತ್ತೆ. ಈ ಬಗ್ಗೆ ದೇವಾಲಯದ ಕೈಪಿಡಿಯಲ್ಲೇ ಉಲ್ಲೇಖಿಸಲಾಗಿದೆ.

ಪ್ರಾಯಶ್ಚಿತ್ತ ಉತ್ಸವ ಮಾಡಿದ ಬಳಿಕವೇ ವೈರಮುಡಿ ಉತ್ಸವ ಮಾಡಲು ಮಂಡ್ಯ ಜಿಲ್ಲಾಡಳಿತ ನಿರ್ಧಾರ
ವೈರಮುಡಿ ಬ್ರಹ್ಮೋತ್ಸವದ ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Mar 15, 2021 | 4:11 PM

Share

ಮಂಡ್ಯ: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಬಾರಿ ವೈರಮುಡಿ ಉತ್ಸವ ಮಾಡಿಲ್ಲ. ಹೀಗಾಗಿ ಈ ಬಾರಿ 3 ದಿನಗಳ ಕಾಲ ಪ್ರಾಯಶ್ಚಿತ್ತ ಉತ್ಸವ ಮಾಡಿದ ಬಳಿಕವೇ ವೈರಮುಡಿ ಉತ್ಸವ ಮಾಡುತ್ತೇವೆ ಎಂದು ಮಂಡ್ಯದಲ್ಲಿ‌ ಪಾಂಡವಪುರ ಎಸಿ ಶಿವಾನಂದಮೂರ್ತಿ ತಿಳಿಸಿದ್ದಾರೆ.

ಪುರಾತನ ಕಾಲದಿಂದಲೂ ವೈರಮುಡಿ ಉತ್ಸವ ಆಚರಿಸಲಾಗ್ತಿದೆ. ಕಳೆದ ಬಾರಿ ವೈರಮುಡಿ ಉತ್ಸವವನ್ನು ಆಚರಿಸದ ಹಿನ್ನೆಲೆಯಲ್ಲಿ ಈ ಬಾರಿ ಕಳಸ ಪೂಜೆ ಸೇರಿ 3 ದಿನಗಳ ಕಾಲ ಪ್ರಾಯಶ್ಚಿತ್ತ ಉತ್ಸವ ಮಾಡಲಾಗುತ್ತೆ. ಈ ಬಗ್ಗೆ ದೇವಾಲಯದ ಕೈಪಿಡಿಯಲ್ಲೇ ಉಲ್ಲೇಖಿಸಲಾಗಿದೆ. ಅದರ ಪ್ರಕಾರವೇ ನಾವು ಪ್ರಾಯಶ್ಚಿತ್ತ ಉತ್ಸವ ಮಾಡುತ್ತೇವೆ ಎಂದು ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಹೇಳಿದ್ದಾರೆ. ಇನ್ನು ಇದೇ ವೇಳೆ ಅವರು ಪ್ರಾಯಶ್ಚಿತ್ತ ಉತ್ಸವ ಬಳಿಕ ಸರಳವಾಗಿ ವೈರಮುಡಿ ಉತ್ಸವ ಆಚರಣೆ ಮಾಡಲಾಗುತ್ತೆ. ಉತ್ಸವಕ್ಕೆ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗುವುದು. ಹೊರಗಿನವರು ವೈರಮುಡಿ ಉತ್ಸವಕ್ಕೆ ಬರದಂತೆ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ವೈರಮುಡಿ ಬ್ರಹ್ಮೋತ್ಸವ ನಡೆಸಲು ಜಿಲ್ಲಾಧಿಕಾರಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು ಮಾರ್ಚ್19ರಿಂದ ಬ್ರಹ್ಮೋತ್ಸವ ಜಾತ್ರೆ ಆರಂಭವಾಗಲಿದೆ. ಹಾಗೂ ಮಾರ್ಚ್ 24ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ವೈರಮುಡಿ ಉತ್ಸವ ನಡೆಯಲಿದೆ. ಈ ಬಾರಿ ದೇವಾಲಯದ ಒಳಗೆ 100 ಜನರಿಗೆ ಅವಕಾಶ ನೀಡಲಾಗುತ್ತೆ ಹಾಗೂ ದೇಗುಲದ ಹೊರಭಾಗದಲ್ಲಿ 2,000 ಜನರಿಗೆ ಅವಕಾಶ ನೀಡಲಾಗುತ್ತೆ.

ಉತ್ಸವದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಸೀಲ್ ಹಾಕಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಹಾಗೂ ಸೀಲ್ ಇದ್ದವರಿಗೆ ಮಾತ್ರ ದೇವಾಲಯದ ಒಳಗೆ ಪ್ರವೇಶ ನೀಡಲಾಗುತ್ತೆ. ಉತ್ಸವಕ್ಕೆ ಸ್ಥಳೀಯರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದ್ದು ಹೊರ ರಾಜ್ಯ, ಜಿಲ್ಲೆಯಿಂದ ಬರುವವರಿಗೆ ಅವಕಾಶವಿಲ್ಲ. ಹಾಗೂ ಕಡ್ಡಾಯವಾಗಿ ಕೊವಿಡ್ ಟೆಸ್ಟ್ ಮಾಡಿಸುವವರು ಮಾತ್ರ ಪಾಲ್ಗೊಳ್ಳಬೇಕು. ಈ ಬಾರಿ ಮಧ್ಯರಾತ್ರಿ 12 ಗಂಟೆಯವರೆ ಮಾತ್ರ ವೈರಮುಡಿ ಉತ್ಸವ ನಡೆಯಲಿದೆ.

ಇದನ್ನೂ ಓದಿ: Ratha Saptami 2021: ರಥ ಸಪ್ತಮಿ ಕಾರ್ಯಕ್ರಮದಲ್ಲಿ ಯದುವೀರ್ ಭಾಗಿ, ಮೇಲುಕೋಟೆಗೆ ಸುವರ್ಣ ರಥ ಸಮರ್ಪಿಸಿದ ಮಧುಸೂದನ್

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!