AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನ ಆದ್ರೂ ಮೃತದೇಹ ಕೊಟ್ಟಿಲ್ಲ, ಶವಾಗಾರದ ಮುಂದೆ ಕುಟುಂಬಸ್ಥರ ಆಕ್ರಂದನ

ಮಂಡ್ಯ: ನಗರದ ಸ್ವರ್ಣಸಂದ್ರದ 53 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ವಿಮ್ಸ್‌ನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಆದರೆ 2 ದಿನ ಕಳೆದರೂ ವ್ಯಕ್ತಿಯ ಮೃತದೇಹ ನೀಡದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರು ಶವಾಗಾರದ ಮುಂದೆ ಎರಡು ದಿನದಿಂದ ಕಾಯುತ್ತಿದ್ದಾರೆ. ಎರಡು ದಿನ ಕಳೆದರೂ ಮಂಡ್ಯ ಮಿಮ್ಸ್ ಸಿಬ್ಬಂದಿ ಮೃತನ ಶವ ನೀಡಿಲ್ಲ. ಶವಗಾರದ ಮುಂದೆ ಸತ್ತವರ ಕುಟುಂಬಸ್ಥರ ಆಕ್ರಂದನ […]

2 ದಿನ ಆದ್ರೂ ಮೃತದೇಹ ಕೊಟ್ಟಿಲ್ಲ, ಶವಾಗಾರದ ಮುಂದೆ ಕುಟುಂಬಸ್ಥರ ಆಕ್ರಂದನ
ಆಯೇಷಾ ಬಾನು
| Edited By: |

Updated on:Jul 08, 2020 | 7:32 PM

Share

ಮಂಡ್ಯ: ನಗರದ ಸ್ವರ್ಣಸಂದ್ರದ 53 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ವಿಮ್ಸ್‌ನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಆದರೆ 2 ದಿನ ಕಳೆದರೂ ವ್ಯಕ್ತಿಯ ಮೃತದೇಹ ನೀಡದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರು ಶವಾಗಾರದ ಮುಂದೆ ಎರಡು ದಿನದಿಂದ ಕಾಯುತ್ತಿದ್ದಾರೆ. ಎರಡು ದಿನ ಕಳೆದರೂ ಮಂಡ್ಯ ಮಿಮ್ಸ್ ಸಿಬ್ಬಂದಿ ಮೃತನ ಶವ ನೀಡಿಲ್ಲ. ಶವಗಾರದ ಮುಂದೆ ಸತ್ತವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದೇ ಶವಾಗಾರದಲ್ಲಿ ಕೊರೊನಾದಿಂದ‌ ಮೃತಪಟ್ಟ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮಾಡಲಾಗಿತ್ತು. ಶವಾಗಾರದ ಪಕ್ಕದಲ್ಲೇ ಕೋವಿಡ್ ವಾರ್ಡ್ ಇದೆ. ಕೊರೊನಾ ಹರಡುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರಿದ್ದಾರೆ.

ಊರಿನಲ್ಲಿ ಶವಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಂಡಿದ್ದೇವೆ. ಬಂದ ನೆಂಟರು ಎಲ್ಲಾ ಹೋಗ್ತಾ ಇದ್ದಾರೆ. ಇವರ ಬಾಯಿಗೆ ಮಣ್ಣಾಕಾ, ಶವ ಯಾಕೆ ಕೊಡ್ತಾ ಇಲ್ಲ. ಅವನು ಸತ್ತ ಈಗ ಇವರು ಬದುಕಿದ್ದವರನ್ನು ಸಾಯಿಸುತ್ತಾ ಇದ್ದಾರೆ. ಇಂತಹ ಆಸ್ಪತ್ರೆಗಳು ಯಾಕೆ ಇರಬೇಕು. ಕೊರೊನಾ ಇದೆ, ಹೊರಗೆ ಬರಬೇಡಿ ಅಂತಾರೆ. ಈಗ ನಮ್ಮನ್ನ ಎರಡು ದಿನದಿಂದ ಶವಾಗಾರದ ಬಳಿ ಕೂರಿಸಿದ್ದಾರೆ ಎಂದು ಮಂಡ್ಯ ಮಿಮ್ಸ್ ಆಸ್ಪತ್ರೆಯ ಅಧಿಕಾರಿಗಳಿಗೆ ಕುಟುಂಬಸ್ಥರು ಹಿಡಿ ಶಾಪ ಹಾಕಿದ್ದಾರೆ.

Published On - 2:36 pm, Wed, 8 July 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ