AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನ ಆದ್ರೂ ಮೃತದೇಹ ಕೊಟ್ಟಿಲ್ಲ, ಶವಾಗಾರದ ಮುಂದೆ ಕುಟುಂಬಸ್ಥರ ಆಕ್ರಂದನ

ಮಂಡ್ಯ: ನಗರದ ಸ್ವರ್ಣಸಂದ್ರದ 53 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ವಿಮ್ಸ್‌ನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಆದರೆ 2 ದಿನ ಕಳೆದರೂ ವ್ಯಕ್ತಿಯ ಮೃತದೇಹ ನೀಡದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರು ಶವಾಗಾರದ ಮುಂದೆ ಎರಡು ದಿನದಿಂದ ಕಾಯುತ್ತಿದ್ದಾರೆ. ಎರಡು ದಿನ ಕಳೆದರೂ ಮಂಡ್ಯ ಮಿಮ್ಸ್ ಸಿಬ್ಬಂದಿ ಮೃತನ ಶವ ನೀಡಿಲ್ಲ. ಶವಗಾರದ ಮುಂದೆ ಸತ್ತವರ ಕುಟುಂಬಸ್ಥರ ಆಕ್ರಂದನ […]

2 ದಿನ ಆದ್ರೂ ಮೃತದೇಹ ಕೊಟ್ಟಿಲ್ಲ, ಶವಾಗಾರದ ಮುಂದೆ ಕುಟುಂಬಸ್ಥರ ಆಕ್ರಂದನ
ಆಯೇಷಾ ಬಾನು
| Updated By: |

Updated on:Jul 08, 2020 | 7:32 PM

Share

ಮಂಡ್ಯ: ನಗರದ ಸ್ವರ್ಣಸಂದ್ರದ 53 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ವಿಮ್ಸ್‌ನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಆದರೆ 2 ದಿನ ಕಳೆದರೂ ವ್ಯಕ್ತಿಯ ಮೃತದೇಹ ನೀಡದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರು ಶವಾಗಾರದ ಮುಂದೆ ಎರಡು ದಿನದಿಂದ ಕಾಯುತ್ತಿದ್ದಾರೆ. ಎರಡು ದಿನ ಕಳೆದರೂ ಮಂಡ್ಯ ಮಿಮ್ಸ್ ಸಿಬ್ಬಂದಿ ಮೃತನ ಶವ ನೀಡಿಲ್ಲ. ಶವಗಾರದ ಮುಂದೆ ಸತ್ತವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದೇ ಶವಾಗಾರದಲ್ಲಿ ಕೊರೊನಾದಿಂದ‌ ಮೃತಪಟ್ಟ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮಾಡಲಾಗಿತ್ತು. ಶವಾಗಾರದ ಪಕ್ಕದಲ್ಲೇ ಕೋವಿಡ್ ವಾರ್ಡ್ ಇದೆ. ಕೊರೊನಾ ಹರಡುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರಿದ್ದಾರೆ.

ಊರಿನಲ್ಲಿ ಶವಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಂಡಿದ್ದೇವೆ. ಬಂದ ನೆಂಟರು ಎಲ್ಲಾ ಹೋಗ್ತಾ ಇದ್ದಾರೆ. ಇವರ ಬಾಯಿಗೆ ಮಣ್ಣಾಕಾ, ಶವ ಯಾಕೆ ಕೊಡ್ತಾ ಇಲ್ಲ. ಅವನು ಸತ್ತ ಈಗ ಇವರು ಬದುಕಿದ್ದವರನ್ನು ಸಾಯಿಸುತ್ತಾ ಇದ್ದಾರೆ. ಇಂತಹ ಆಸ್ಪತ್ರೆಗಳು ಯಾಕೆ ಇರಬೇಕು. ಕೊರೊನಾ ಇದೆ, ಹೊರಗೆ ಬರಬೇಡಿ ಅಂತಾರೆ. ಈಗ ನಮ್ಮನ್ನ ಎರಡು ದಿನದಿಂದ ಶವಾಗಾರದ ಬಳಿ ಕೂರಿಸಿದ್ದಾರೆ ಎಂದು ಮಂಡ್ಯ ಮಿಮ್ಸ್ ಆಸ್ಪತ್ರೆಯ ಅಧಿಕಾರಿಗಳಿಗೆ ಕುಟುಂಬಸ್ಥರು ಹಿಡಿ ಶಾಪ ಹಾಕಿದ್ದಾರೆ.

Published On - 2:36 pm, Wed, 8 July 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ