ಕೆಲ್ಸ ಸಿಗದ ಸಿಟ್ಟಿಗೆ ಬಾಂಬ್ ಇಟ್ನಾ? ಉಡುಪಿ ಮೂಲದ ಇಂಜಿನಿಯರ್ ಮೇಲೆ ಪೊಲೀಸರ ಡೌಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಸಂಬಂಧ ಬೆನ್ನತ್ತಿದ್ದ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಉಡುಪಿ ಮೂಲದ ಇಂಜಿನಿಯರಿಂಗ್ ಪದವೀಧರನ ಮೇಲೆ ಪೊಲೀಸರು ಡೌಟ್​ ಪಟ್ಟಿದ್ದಾರೆ. ಮೇಲ್ನೋಟಕ್ಕೆ ಏರ್​ಪೋರ್ಟ್​ ಅಧಿಕಾರಿಗಳ ಮೇಲಿನ ಸಿಟ್ಟಿಗೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಏರ್​ಪೋರ್ಟ್​ ಅಧಿಕಾರಿಗಳ ಮೇಲಿನ ಸಿಟ್ಟಿಗೆ ಕೃತ್ಯ? ಇಂಜಿನಿಯರಿಂಗ್ ಪದವೀಧರ ಆದಿತ್ಯ ಬಾಂಬ್ ಇಟ್ಟಿದ್ದೇನೆ ಎಂದು ಫೋನ್ ಮಾಡಿದ್ದು ಇದೇ ಮೊದಲಲ್ಲ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ […]

ಕೆಲ್ಸ ಸಿಗದ ಸಿಟ್ಟಿಗೆ ಬಾಂಬ್ ಇಟ್ನಾ? ಉಡುಪಿ ಮೂಲದ ಇಂಜಿನಿಯರ್ ಮೇಲೆ ಪೊಲೀಸರ ಡೌಟ್
ಸಾಧು ಶ್ರೀನಾಥ್​

Updated on: Jan 21, 2020 | 2:22 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಸಂಬಂಧ ಬೆನ್ನತ್ತಿದ್ದ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಉಡುಪಿ ಮೂಲದ ಇಂಜಿನಿಯರಿಂಗ್ ಪದವೀಧರನ ಮೇಲೆ ಪೊಲೀಸರು ಡೌಟ್​ ಪಟ್ಟಿದ್ದಾರೆ. ಮೇಲ್ನೋಟಕ್ಕೆ ಏರ್​ಪೋರ್ಟ್​ ಅಧಿಕಾರಿಗಳ ಮೇಲಿನ ಸಿಟ್ಟಿಗೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಏರ್​ಪೋರ್ಟ್​ ಅಧಿಕಾರಿಗಳ ಮೇಲಿನ ಸಿಟ್ಟಿಗೆ ಕೃತ್ಯ?
ಇಂಜಿನಿಯರಿಂಗ್ ಪದವೀಧರ ಆದಿತ್ಯ ಬಾಂಬ್ ಇಟ್ಟಿದ್ದೇನೆ ಎಂದು ಫೋನ್ ಮಾಡಿದ್ದು ಇದೇ ಮೊದಲಲ್ಲ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಉಡುಪಿ ಮೂಲದ ಆದಿತ್ಯ ಅರ್ಜಿ ಸಲ್ಲಿಸಿದ್ದ. ಆದ್ರೆ ಸೂಕ್ತ ದಾಖಲೆ ಕೊಡದ ಹಿನ್ನೆಲೆಯಲ್ಲಿ ಆತನಿಗೆ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಸಿಟ್ಟಿಗೆದ್ದು ವಿಮಾನ ಮತ್ತು ಪಾರ್ಕಿಂಗ್ ಲಾಟ್‌ನಲ್ಲಿ ಬಾಂಬ್ ಇಟ್ಟಿದ್ದೇನೆ ಎಂದು ಎರಡು ಬಾರಿ ಹುಸಿ ಬಾಂಬ್ ಕರೆ ಮಾಡಿದ್ದ. ಈ ಸಂಬಂಧ 2018ರ ಆಗಸ್ಟ್​ನಲ್ಲಿ ಆರೋಪಿ ಆದಿತ್ಯನನ್ನು ಬೆಂಗಳೂರು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದರು.

2018ರಲ್ಲಿ ಎರೆಡೆರಡು ಬಾರಿ ಹುಸಿ ಬಾಂಬ್ ಕರೆಮಾಡಿ ತಗಲಾಕ್ಕೊಂಡಿದ್ದ ಆರೋಪಿ ಬಗ್ಗೆ ಮಂಗಳೂರು ಪೊಲೀಸರಿಗೆ ಕೆಐಎಎಲ್ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೆಸ್ಟ್ ಆದ ಸಂದರ್ಭದಲ್ಲಿ ಕಚ್ಚಾ ಬಾಂಬ್ ತಯಾರಿಕೆ ಬಗ್ಗೆ ಗೊತ್ತಿರುವುದಾಗಿ ಆರೋಪಿ ಹೇಳಿಕೊಂಡಿದ್ದ. ಆರೋಪಿಯ ಸಂಪೂರ್ಣ ಮಾಹಿತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಮಂಗಳೂರು ಪೊಲೀಸರಿಗೆ ನೀಡಿದ್ದಾರೆ.

ಬಾಂಬ್ ಇಟ್ಟಿದ್ದ ಬ್ಯಾಗ್‌ನಲ್ಲಿ ಮ್ಯಾಪ್ ಪತ್ತೆ:
ಮಂಗಳೂರು ವಿಮಾನ ನಿಲ್ದಾಣದಲ್ಲಿ ಜೀವಂತ ಬಾಂಬ್ ಇಟ್ಟಿದ್ದ ಬ್ಯಾಗ್‌ನಲ್ಲಿ ಒಂದು ಮ್ಯಾಪ್ ಪತ್ತೆಯಾಗಿದೆ. ಆರೋಪಿಗಳೇ ಬಿಡಿಸಿರುವ ಮ್ಯಾಪ್ ಪತ್ತೆಯಾಗಿದ್ದು, ಮ್ಯಾಪ್ ಡಿಕೋಡ್ ಮಾಡುವುದಕ್ಕೆ ಪೊಲೀಸರು ತಜ್ಞರ ಸಹಕಾರ ಕೋರಿದ್ದಾರೆ. ಮ್ಯಾಪ್‌ನಲ್ಲಿ ಹಲವಾರು ವಿಚಾರಗಳು ಬಹಿರಂಗವಾಗುವ ಸಾಧ್ಯತೆ ಇದೆ.




Published On - 2:20 pm, Tue, 21 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us