AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿ, ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?
ಸಾಂಧರ್ಬಿಕ ಚಿತ್ರ
ಪೃಥ್ವಿಶಂಕರ
| Edited By: |

Updated on:Dec 21, 2020 | 6:07 PM

Share

ಮಂಗಳೂರು: ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಬೋಟನ್ನು ತಪಾಸಣೆ ಮಾಡಲು ಕೇರಳದ ಪೊಲೀಸರು ಬಂದಿದ್ದಾರೆ. ಈ ವೇಳೆ ಕೇರಳದ ಪೊಲೀಸರನ್ನು ಲಾಕ್ ಮಾಡಿದ ಮಂಗಳೂರು ಮೂಲದ ಮೀನುಗಾರರು, ಪೊಲೀಸರನ್ನು ಬೋಟ್‌ನಲ್ಲಿ ಮಂಗಳೂರು ಬಂದರಿಗೆ ಕರೆತಂದಿರುವ ಘಟನೆ ನಡೆದಿದೆ.

ರಘು, ಸುಧೀಶ್ ಕಿಡ್ನ್ಯಾಪ್ ಆಗಿ ರಿಲೀಸ್ ಆದ ಕೇರಳದ ಪೊಲೀಸರು. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ಶಿರಿಯಾ ಪ್ರದೇಶದಲ್ಲಿ ಗಡಿ ಮೀರಿ 19 ಮೀನುಗಾರರಿದ್ದ ಮಂಗಳೂರಿನ ಬೋಟ್‌ ಮೀನುಗಾರಿಕೆ ನಡೆಸುತ್ತಿತ್ತು. ಈ ವೇಳೆ ಕೇರಳ ಪೊಲೀಸರು ಸಾಗರದಲ್ಲೇ ಬೋಟ್ ತಪಾಸಣೆ ಮಾಡಿದ್ದಾರೆ.

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿದ್ದಾರೆ. ಬಳಿಕ ಮೀನುಗಾರರು ಪೊಲೀಸರನ್ನು ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಬೋಟ್ ಲೈಸೆನ್ಸ್ ಇಲ್ಲದಿರೋದ್ರಿಂದ ಬೋಟ್ ಸೀಝ್ ಆಗುವ ಭಯದಲ್ಲಿ ಕಿಡ್ನಾಪ್ ಮಾಡಿರುವುದಾಗಿ ಮೀನುಗಾರರು ತಮ್ಮ ಅಳಲನ್ನು ತೋಡಿಕೊಂಡಿದ್ದು, ಮೀನುಗಾರರ ವಿರುದ್ಧ ಕಾಸರಗೋಡು ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು

Published On - 5:46 pm, Mon, 21 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ