AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿ, ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?
ಸಾಂಧರ್ಬಿಕ ಚಿತ್ರ
ಪೃಥ್ವಿಶಂಕರ
| Edited By: |

Updated on:Dec 21, 2020 | 6:07 PM

Share

ಮಂಗಳೂರು: ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಬೋಟನ್ನು ತಪಾಸಣೆ ಮಾಡಲು ಕೇರಳದ ಪೊಲೀಸರು ಬಂದಿದ್ದಾರೆ. ಈ ವೇಳೆ ಕೇರಳದ ಪೊಲೀಸರನ್ನು ಲಾಕ್ ಮಾಡಿದ ಮಂಗಳೂರು ಮೂಲದ ಮೀನುಗಾರರು, ಪೊಲೀಸರನ್ನು ಬೋಟ್‌ನಲ್ಲಿ ಮಂಗಳೂರು ಬಂದರಿಗೆ ಕರೆತಂದಿರುವ ಘಟನೆ ನಡೆದಿದೆ.

ರಘು, ಸುಧೀಶ್ ಕಿಡ್ನ್ಯಾಪ್ ಆಗಿ ರಿಲೀಸ್ ಆದ ಕೇರಳದ ಪೊಲೀಸರು. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ಶಿರಿಯಾ ಪ್ರದೇಶದಲ್ಲಿ ಗಡಿ ಮೀರಿ 19 ಮೀನುಗಾರರಿದ್ದ ಮಂಗಳೂರಿನ ಬೋಟ್‌ ಮೀನುಗಾರಿಕೆ ನಡೆಸುತ್ತಿತ್ತು. ಈ ವೇಳೆ ಕೇರಳ ಪೊಲೀಸರು ಸಾಗರದಲ್ಲೇ ಬೋಟ್ ತಪಾಸಣೆ ಮಾಡಿದ್ದಾರೆ.

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿದ್ದಾರೆ. ಬಳಿಕ ಮೀನುಗಾರರು ಪೊಲೀಸರನ್ನು ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಬೋಟ್ ಲೈಸೆನ್ಸ್ ಇಲ್ಲದಿರೋದ್ರಿಂದ ಬೋಟ್ ಸೀಝ್ ಆಗುವ ಭಯದಲ್ಲಿ ಕಿಡ್ನಾಪ್ ಮಾಡಿರುವುದಾಗಿ ಮೀನುಗಾರರು ತಮ್ಮ ಅಳಲನ್ನು ತೋಡಿಕೊಂಡಿದ್ದು, ಮೀನುಗಾರರ ವಿರುದ್ಧ ಕಾಸರಗೋಡು ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು

Published On - 5:46 pm, Mon, 21 December 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್