AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿ, ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಗಡಿ ಮೀರಿ ಮೀನುಗಾರಿಕೆ: ತಪಾಸಣೆಗೆ ಬಂದ ಪೊಲೀಸರನ್ನೇ ಬಂಧಿಸಿ ಬಂದರಿಗೆ ಕರೆತಂದ ಮೀನುಗಾರರು, ಯಾವೂರಲ್ಲಿ?
ಸಾಂಧರ್ಬಿಕ ಚಿತ್ರ
ಪೃಥ್ವಿಶಂಕರ
| Edited By: |

Updated on:Dec 21, 2020 | 6:07 PM

Share

ಮಂಗಳೂರು: ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಬೋಟನ್ನು ತಪಾಸಣೆ ಮಾಡಲು ಕೇರಳದ ಪೊಲೀಸರು ಬಂದಿದ್ದಾರೆ. ಈ ವೇಳೆ ಕೇರಳದ ಪೊಲೀಸರನ್ನು ಲಾಕ್ ಮಾಡಿದ ಮಂಗಳೂರು ಮೂಲದ ಮೀನುಗಾರರು, ಪೊಲೀಸರನ್ನು ಬೋಟ್‌ನಲ್ಲಿ ಮಂಗಳೂರು ಬಂದರಿಗೆ ಕರೆತಂದಿರುವ ಘಟನೆ ನಡೆದಿದೆ.

ರಘು, ಸುಧೀಶ್ ಕಿಡ್ನ್ಯಾಪ್ ಆಗಿ ರಿಲೀಸ್ ಆದ ಕೇರಳದ ಪೊಲೀಸರು. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ಶಿರಿಯಾ ಪ್ರದೇಶದಲ್ಲಿ ಗಡಿ ಮೀರಿ 19 ಮೀನುಗಾರರಿದ್ದ ಮಂಗಳೂರಿನ ಬೋಟ್‌ ಮೀನುಗಾರಿಕೆ ನಡೆಸುತ್ತಿತ್ತು. ಈ ವೇಳೆ ಕೇರಳ ಪೊಲೀಸರು ಸಾಗರದಲ್ಲೇ ಬೋಟ್ ತಪಾಸಣೆ ಮಾಡಿದ್ದಾರೆ.

ತಮ್ಮ ಬೋಟನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆಂಬ ಭೀತಿಗೆ ಒಳಗಾದ ಮೀನುಗಾರರು ಪೊಲೀಸರನ್ನು ಬೋಟ್‌ನಲ್ಲೇ ಲಾಕ್ ಮಾಡಿದ್ದಾರೆ. ಬಳಿಕ ಮೀನುಗಾರರು ಪೊಲೀಸರನ್ನು ತಮ್ಮ ಜೊತೆಗೆ ನೇರವಾಗಿ ಮಂಗಳೂರು ಬಂದರಿಗೆ ಕರೆತಂದಿದ್ದಾರೆ. ತದನಂತರ ಮಂಗಳೂರು ಬಂದರಿನಲ್ಲಿ ಪೊಲೀಸರನ್ನು ರಿಲೀಸ್ ಮಾಡಿ ಕಳುಹಿಸಿದ್ದಾರೆ.

ಬೋಟ್ ಲೈಸೆನ್ಸ್ ಇಲ್ಲದಿರೋದ್ರಿಂದ ಬೋಟ್ ಸೀಝ್ ಆಗುವ ಭಯದಲ್ಲಿ ಕಿಡ್ನಾಪ್ ಮಾಡಿರುವುದಾಗಿ ಮೀನುಗಾರರು ತಮ್ಮ ಅಳಲನ್ನು ತೋಡಿಕೊಂಡಿದ್ದು, ಮೀನುಗಾರರ ವಿರುದ್ಧ ಕಾಸರಗೋಡು ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು

Published On - 5:46 pm, Mon, 21 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್