AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ವಾಹನ ಸವಾರ ಸಾವು; ಹೆದ್ದಾರಿ ಪ್ರಾಧಿಕಾರಕ್ಕೆ ಮಂಗಳೂರು ಪೊಲೀಸ್ ನೋಟಿಸ್

ಘಟನೆ ಸಂಭವಿಸಿದಾಗಿನಿಂದ, ಎನ್‌ಎಚ್‌ಎಐ ನಿರ್ಲಕ್ಷ್ಯದ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆ ತೀವ್ರಗೊಂಡಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಈ ಹಿಂದೆ ಇಂಥ ಪ್ರಕರಣಗಳಲ್ಲಿ ನೀಡಿರುವ ವಿವಿಧ ಆದೇಶಗಳನ್ನು ಉಲ್ಲೇಖಿಸಿ ನಾಗರಿಕರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ.

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ವಾಹನ ಸವಾರ ಸಾವು; ಹೆದ್ದಾರಿ ಪ್ರಾಧಿಕಾರಕ್ಕೆ ಮಂಗಳೂರು ಪೊಲೀಸ್ ನೋಟಿಸ್
ಪ್ರಾತಿನಿಧಿಕ ಚಿತ್ರ
Ganapathi Sharma
|

Updated on: Jul 19, 2023 | 2:50 PM

Share

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ವಾಹನವೊಂದು ಅಪಘಾತಕ್ಕೀಡಾಗಿ (Road Accident) ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇತ್ತೀಚೆಗೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸಿದಾಗ ಅಪಘಾತ ಸಂಭವಿಸಿತ್ತು. ಪರಿಣಾಮವಾಗಿ ಕೆಂಜಾರಿನ 69 ವರ್ಷದ ನಿವಾಸಿ ಮೃತಪಟ್ಟಿದ್ದರು. ಈ ವಿಚಾರವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ನೋಟಿಸ್ ನೀಡಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಬಳಕೆದಾರರಿಂದ ಟೋಲ್ ಸಂಗ್ರಹಿಸಿದರೂ ಹೆದ್ದಾರಿಯನ್ನು ಮೋಟಾರು ಚಾಲನೆ ಮಾಡಬಹುದಾದ ಸ್ಥಿತಿಯಲ್ಲಿ ಇಡದಿರುವುದಕ್ಕಾಗಿ ನೆಟಿಜನ್‌ಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆ ಸಂಭವಿಸಿದಾಗಿನಿಂದ, ಎನ್‌ಎಚ್‌ಎಐ ನಿರ್ಲಕ್ಷ್ಯದ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆ ತೀವ್ರಗೊಂಡಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಈ ಹಿಂದೆ ಇಂಥ ಪ್ರಕರಣಗಳಲ್ಲಿ ನೀಡಿರುವ ವಿವಿಧ ಆದೇಶಗಳನ್ನು ಉಲ್ಲೇಖಿಸಿ ನಾಗರಿಕರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: Bengaluru-Mysore Expressway Accident: ಮೊದಲ ಹಂತದ ಸಮೀಕ್ಷೆ ಪೂರ್ಣಗೊಳಿಸಿದ ಎನ್​ಹೆಚ್ಎ​ಐನ ವಿಶೇಷ ಸಮಿತಿ

ಈ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಆಯುಕ್ತರು, ಈ ಬಗ್ಗೆ ತನಿಖೆ ನಡೆಸಿ ಪ್ರಾಧಿಕಾರಕ್ಕೆ ನೋಟಿಸ್ ನೀಡಲಾಗುವುದು ಎಂದು ಹೇಳಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ