AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರದ ನಿರ್ಧಾರ

ಮಾವು ಬೆಳೆಯಲ್ಲಿ ರಾಮನಗರ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದರೂ, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಮಾವು ಸಂಸ್ಕರಣಾ ಘಟಕಗಳಿರಲಿಲ್ಲ. ಕೊನೆಗೂ ಸರ್ಕಾರ ಮಾವು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಮುಂದಾಗಿದೆ.

ರಾಮನಗರ: ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರದ ನಿರ್ಧಾರ
ಮಾವು
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 08, 2020 | 7:42 PM

ರಾಮನಗರ: ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಜಿಲ್ಲೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಿದ್ದು, ಸಂಸ್ಕರಣಾ ಘಟಕ ಸ್ಥಾಪನೆಗೆ 15 ಎಕರೆ ಭೂಮಿ ನೀಡುವುದಾಗಿ ಸರ್ಕಾರ ಹೇಳಿದೆ.

ಮಾವು ಬೆಳೆಯಲ್ಲಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಆದರೆ ಇಲ್ಲಿಯವರೆಗೆ ಮಾವು ಸಂಸ್ಕರಣಾ ಘಟಕಗಳಿರಲಿಲ್ಲ. ಹಲವು ವರ್ಷಗಳಿಂದ ಸಂಸ್ಕರಣಾ ಘಟಕದ ಬಗ್ಗೆ ಮಾತುಗಳು ಬರುತ್ತಿತ್ತು. ಇದೀಗ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿಯ ಹತ್ತಿರದಲ್ಲಿ ಇರುವ ತೋಟಗಾರಿಕಾ ಇಲಾಖೆಗೆ ಸೇರಿದ 15 ಎಕರೆ ಭೂಮಿ ನೀಡುವುದಾಗಿ ಹೇಳಿದೆ.

ಮಾವಿನ ತೋಪು

ರಾಜ್ಯದಲ್ಲಿ ಎಲ್ಲಿಯೂ ಬೃಹತ್ ಮಾವು ಸಂಸ್ಕರಣ ಘಟಕ ಇಲ್ಲ. ರಾಮನಗರ ಜಿಲ್ಲೆಯಲ್ಲಿ ಸ್ಥಾಪನೆ ಆಗುತ್ತಿರುವುದು ಜಿಲ್ಲೆಯ ರೈತರ ಸಂತಸಕ್ಕೆ ಕಾರಣವಾಗಿದೆ. ಹಾಗೂ ರೈತರಿಗೆ ಉತ್ತಮ ಬೆಲೆ ಕಲ್ಪಿಸಲು ನೆರವಾಗುತ್ತದೆ. ಪ್ರತಿ ವರ್ಷ ಬರ, ಮಳೆ, ಬೆಲೆ ಕುಸಿತದಿಂದಾಗಿ ಒಂದಿಲ್ಲೊಂದು ಕಾರಣಕ್ಕೆ ಮಾವು ಬೆಳೆಗಾರರು ತೊಂದರೆ ಅನುಭವಿಸುತ್ತಲೇ ಬಂದಿದ್ದರು.

ಜಿಲ್ಲೆಯಲ್ಲಿ ಸುಮಾರು 32 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ವಾರ್ಷಿಕ ಸುಮಾರು 2.5 ಲಕ್ಷ ಟನ್​ಗಳಷ್ಟು ಇಳುವರಿ, ₹ 400 ಕೋಟಿ ವಹಿವಾಟು ನಡೆಯುತ್ತಿದೆ. ಒಟ್ಟು ಉತ್ಪನ್ನದಲ್ಲಿ 50 ಸಾವಿರ ಟನ್​ ಹಣ್ಣು ಸಂಸ್ಕರಣೆಗೆ ಸಿಗಲಿದೆ.

ಮಾವಿನ ಕಾಲದಲ್ಲಿ ಮಾವು ಸಂಸ್ಕರಣೆ ಮಾಡಿ ಉಳಿದ ದಿನಗಳಲ್ಲಿ ಬಾಳೆ, ಚಿಕ್ಕು, ಪಪ್ಪಾಯ, ನೀಲಿದ್ರಾಕ್ಷಿ ಹಣ್ಣುಗಳ ಸಂಸ್ಕರಣೆ ಹಾಗೂ ಎಳನೀರಿನ ಟೆಟ್ರಾ ಪ್ಯಾಕ್​ ಸಿದ್ಧಪಡಿಸಲು ಘಟಕವನ್ನು ಬಳಸಿಕೊಳ್ಳವ ಯೋಚನೆ ಇದೆ.

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ