AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರದ ನಿರ್ಧಾರ

ಮಾವು ಬೆಳೆಯಲ್ಲಿ ರಾಮನಗರ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದರೂ, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಮಾವು ಸಂಸ್ಕರಣಾ ಘಟಕಗಳಿರಲಿಲ್ಲ. ಕೊನೆಗೂ ಸರ್ಕಾರ ಮಾವು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಮುಂದಾಗಿದೆ.

ರಾಮನಗರ: ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರದ ನಿರ್ಧಾರ
ಮಾವು
shruti hegde
| Edited By: |

Updated on: Dec 08, 2020 | 7:42 PM

Share

ರಾಮನಗರ: ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಜಿಲ್ಲೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಿದ್ದು, ಸಂಸ್ಕರಣಾ ಘಟಕ ಸ್ಥಾಪನೆಗೆ 15 ಎಕರೆ ಭೂಮಿ ನೀಡುವುದಾಗಿ ಸರ್ಕಾರ ಹೇಳಿದೆ.

ಮಾವು ಬೆಳೆಯಲ್ಲಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಆದರೆ ಇಲ್ಲಿಯವರೆಗೆ ಮಾವು ಸಂಸ್ಕರಣಾ ಘಟಕಗಳಿರಲಿಲ್ಲ. ಹಲವು ವರ್ಷಗಳಿಂದ ಸಂಸ್ಕರಣಾ ಘಟಕದ ಬಗ್ಗೆ ಮಾತುಗಳು ಬರುತ್ತಿತ್ತು. ಇದೀಗ ಮಾವು ಸಂಸ್ಕರಣಾ ಘಟಕ ಸ್ಥಾಪನೆಗೆ ಸರ್ಕಾರ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿಯ ಹತ್ತಿರದಲ್ಲಿ ಇರುವ ತೋಟಗಾರಿಕಾ ಇಲಾಖೆಗೆ ಸೇರಿದ 15 ಎಕರೆ ಭೂಮಿ ನೀಡುವುದಾಗಿ ಹೇಳಿದೆ.

ಮಾವಿನ ತೋಪು

ರಾಜ್ಯದಲ್ಲಿ ಎಲ್ಲಿಯೂ ಬೃಹತ್ ಮಾವು ಸಂಸ್ಕರಣ ಘಟಕ ಇಲ್ಲ. ರಾಮನಗರ ಜಿಲ್ಲೆಯಲ್ಲಿ ಸ್ಥಾಪನೆ ಆಗುತ್ತಿರುವುದು ಜಿಲ್ಲೆಯ ರೈತರ ಸಂತಸಕ್ಕೆ ಕಾರಣವಾಗಿದೆ. ಹಾಗೂ ರೈತರಿಗೆ ಉತ್ತಮ ಬೆಲೆ ಕಲ್ಪಿಸಲು ನೆರವಾಗುತ್ತದೆ. ಪ್ರತಿ ವರ್ಷ ಬರ, ಮಳೆ, ಬೆಲೆ ಕುಸಿತದಿಂದಾಗಿ ಒಂದಿಲ್ಲೊಂದು ಕಾರಣಕ್ಕೆ ಮಾವು ಬೆಳೆಗಾರರು ತೊಂದರೆ ಅನುಭವಿಸುತ್ತಲೇ ಬಂದಿದ್ದರು.

ಜಿಲ್ಲೆಯಲ್ಲಿ ಸುಮಾರು 32 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ವಾರ್ಷಿಕ ಸುಮಾರು 2.5 ಲಕ್ಷ ಟನ್​ಗಳಷ್ಟು ಇಳುವರಿ, ₹ 400 ಕೋಟಿ ವಹಿವಾಟು ನಡೆಯುತ್ತಿದೆ. ಒಟ್ಟು ಉತ್ಪನ್ನದಲ್ಲಿ 50 ಸಾವಿರ ಟನ್​ ಹಣ್ಣು ಸಂಸ್ಕರಣೆಗೆ ಸಿಗಲಿದೆ.

ಮಾವಿನ ಕಾಲದಲ್ಲಿ ಮಾವು ಸಂಸ್ಕರಣೆ ಮಾಡಿ ಉಳಿದ ದಿನಗಳಲ್ಲಿ ಬಾಳೆ, ಚಿಕ್ಕು, ಪಪ್ಪಾಯ, ನೀಲಿದ್ರಾಕ್ಷಿ ಹಣ್ಣುಗಳ ಸಂಸ್ಕರಣೆ ಹಾಗೂ ಎಳನೀರಿನ ಟೆಟ್ರಾ ಪ್ಯಾಕ್​ ಸಿದ್ಧಪಡಿಸಲು ಘಟಕವನ್ನು ಬಳಸಿಕೊಳ್ಳವ ಯೋಚನೆ ಇದೆ.

Follow Us
shruti hegde
shruti hegde
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ