AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MITಯಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ: ಕಾಲೇಜು ಕ್ಯಾಂಪಸ್​ ಆಯ್ತು ಕಂಟೇನ್ಮೆಂಟ್ ಜೋನ್

ಜಿಲ್ಲೆಯ ಮಣಿಪಾಲದಲ್ಲಿರುವ ಪ್ರತಿಷ್ಠಿತ MIT ಕಾಲೇಜಿನಲ್ಲಿ ಇಂದು 27 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಆದ್ದರಿಂದ ಕಾಲೇಜು ಕ್ಯಾಂಪಸ್​ನ ಇದೀಗ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

MITಯಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ: ಕಾಲೇಜು ಕ್ಯಾಂಪಸ್​ ಆಯ್ತು ಕಂಟೇನ್ಮೆಂಟ್ ಜೋನ್
ಮಣಿಪಾಲ್​ ಇನ್​ಸ್ಟಿಟ್ಯೂಟ್ ಆಫ್​ ಟೆಕ್ನಾಲಜಿ
KUSHAL V
| Edited By: |

Updated on:Mar 18, 2021 | 11:47 AM

Share

ಉಡುಪಿ: ಜಿಲ್ಲೆಯಲ್ಲಿ ಇಂದು 42 ಜನರಿಗೆ ಕೊರೊನಾ ದೃಢಪಟ್ಟಿದೆ. ಇದಲ್ಲದೆ, ಜಿಲ್ಲೆಯ ಮಣಿಪಾಲದಲ್ಲಿರುವ ಪ್ರತಿಷ್ಠಿತ MIT ಕಾಲೇಜಿನಲ್ಲಿ ಇಂದು 27 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು 52 ವಿದ್ಯಾರ್ಥಿಗಳು ಕೊರೊನಾ ಸೋಂಕಿತರಾಗಿದ್ದಾರೆ. ಆದ್ದರಿಂದ ಕಾಲೇಜು ಕ್ಯಾಂಪಸ್​ನ ಇದೀಗ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಕಾಲೇಜಿಗೆ ಬಂದಿದ್ದ ಅಂತಾರಾಜ್ಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೊನಾ ಪತ್ತೆಯಾಗಿದೆ ಎಂದು ಉಡುಪಿ ಡಿಹೆಚ್​ಒ ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿಂದು ಹೊಸದಾಗಿ 1,275 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,63,614ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 12,407 ಜನರ ಅಸುನೀಗಿದ್ದಾರೆ. ಇದಲ್ಲದೆ, ಸೋಂಕಿತರ ಪೈಕಿ 9,40,968 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 10,220 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 786 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,13,485ಕ್ಕೇರಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಈವರೆಗೆ ಕೊರೊನಾಗೆ 4,530 ಜನರ ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಸಕ್ಕರೆ ನಾಡಿನಿಂದ ಕಹಿ ಸುದ್ದಿ: ಲೈನ್​ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಸಿಎಂ BSY ತವರೂರಲ್ಲಿ ಪವರ್​​ಮ್ಯಾನ್​ ಸಾವು

Published On - 11:20 pm, Wed, 17 March 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ