AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಬುಟ್ಟಿಯಲ್ಲಿ ಮಂಜು ಅಡಗಿಸಿಟ್ಟಿದ್ದೇನು?; ಕಳ್ಳ ಕೆಲಸದ ಬಗ್ಗೆ ಮನೆ ಮಂದಿಗೆ ಹೇಳೋರು ಯಾರು?

ದಿವ್ಯಾ ಸುರೇಶ್​ ಹಾಗೂ ಮಂಜು ಪಾವಗಡ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಅನ್ಯೋನ್ಯವಾಗಿರುತ್ತಾರೆ. ಸಮಯ ಸಿಕ್ಕಾಗೆಲ್ಲ ಬಿಗ್​ ಬಾಸ್​ ಮನೆಯಲ್ಲಿ ಇವರು ಹರಟೆ ಹೊಡೆಯುತ್ತಿರುತ್ತಾರೆ.

ಕಸದ ಬುಟ್ಟಿಯಲ್ಲಿ ಮಂಜು ಅಡಗಿಸಿಟ್ಟಿದ್ದೇನು?; ಕಳ್ಳ ಕೆಲಸದ ಬಗ್ಗೆ ಮನೆ ಮಂದಿಗೆ ಹೇಳೋರು ಯಾರು?
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
|

Updated on: Mar 19, 2021 | 8:32 PM

Share

ಬಿಗ್​ ಬಾಸ್ ಮನೆಯಲ್ಲಿ ಹೊಸ ಹೊಸ ಡ್ರಾಮಾಗಳು ನಡೆಯುತ್ತಿವೆ. ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುವ ಸ್ಪರ್ಧಿಗಳು, ಎಲ್ಲರ ಎದುರು ಮತ್ತೊಂದು ರೀತಿ ಮಾತನಾಡುತ್ತಾರೆ. ಬಿಗ್​ ಬಾಸ್​ ಮನೆಯ ಸ್ಪರ್ಧಿಗಳು ಕೆಲವೊಮ್ಮೆ ಕದ್ದು ಮುಚ್ಚಿ ಕಳ್ಳ ಕೆಲಸಗಳನ್ನು ಮಾಡಿದ ಉದಾಹರಣೆ ಇದೆ. ಈಗ ಇದೇ ರೀತಿಯ ಕೆಲಸವನ್ನು ಲ್ಯಾಗ್​ ಮಂಜು ಮಾಡಿದ್ದಾರೆ. ಅಷ್ಟೇ ಅಲ್ಲ, ಸೈಲೆಂಟ್​ ಆಗಿ ಅದನ್ನು ಮುಚ್ಚಿ ಹಾಕೋಕು ಕೂಡ ಪ್ರಯತ್ನ ಮಾಡಿದ್ದಾರೆ. ದಿವ್ಯಾ ಸುರೇಶ್​ ಹಾಗೂ ಮಂಜು ಪಾವಗಡ ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಅನ್ಯೋನ್ಯವಾಗಿರುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಒಬ್ಬರಿಗೊಬ್ಬರು ಜಗಳ ಆಡಿದ ಉದಾಹರಣೆ ತುಂಬಾನೇ ಕಡಿಮೆ. ಸಮಯ ಸಿಕ್ಕಾಗೆಲ್ಲ ಬಿಗ್​ ಬಾಸ್​ ಮನೆಯಲ್ಲಿ ಇವರು ಹರಟೆ ಹೊಡೆಯುತ್ತಿರುತ್ತಾರೆ. ಇಂದು (ಮಾರ್ಚ್​ 19) ಕೂಡ ಹಾಗೆಯೇ ಆಗಿದೆ.

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಹಾಗೂ ಮಂಜು ಮಾತನಾಡುತ್ತಿದ್ದರು. ಆಗ ಮಂಜು ಕಾಫಿ ಕಪ್​ ಇಡೋಕೆ ಹೋಗಿ ಕೆಳಕ್ಕೆ ಬೀಳಿಸಿದ್ದಾರೆ. ಆ ಕಪ್​ ಬಿದ್ದ ರಭಸಕ್ಕೆ ಒಡೆದೇ ಹೋಗಿದೆ. ಬಿಗ್​ ಬಾಸ್​ ಕೊಟ್ಟ ಕಪ್​ಅನ್ನು ಒಡೆದ ನಂತರ ಮಂಜುಗೆ ಅತೀವವಾಗಿ ಅಪರಾಧ ಮನೋಭಾವನೆ ಕಾಡಿದೆ.

ಕಪ್​ ಒಡೆದು ಹಾಕಿದ್ದಕ್ಕೆ ಸಾರಿ ಬಿಗ್​ ಬಾಸ್​. ದಯವಿಟ್ಟು ನನ್ನನ್ನು ಕ್ಷಮಿಸಿ ಬಿಗ್​ ಬಾಸ್​ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ. ನಾನು ಬೇಕಂತಲೇ ಇದನ್ನು ಒಡೆದಿಲ್ಲ. ಮಿಸ್​ ಆಗಿ ಬಿದ್ದು ಹೋಗಿದೆ. ಯಾರಿಗೂ ಗೊತ್ತಾಗದಂತೆ ಇದನ್ನು ಬಚ್ಚಿಡುತ್ತೇನೆ. ಆಮೇಲೆ ಸ್ಪರ್ಧಿಗಳ ಬಳಿ ನನ್ನ ಕಪ್​ ಎಲ್ಲಿದೆ ಎಂದು ಪ್ರಶ್ನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಘಟನೆಯನ್ನು ನೋಡಿ ದಿವ್ಯಾ ನಕ್ಕಿದ್ದಾರೆ.

ಒಡೆದ ಕಪ್​ಅನ್ನು ಮಂಜು ಕಸದ ಬುಟ್ಟಿ ಒಳಗೆ ಬಚ್ಚಿಟ್ಟಿದ್ದಾರೆ. ಅಷ್ಟೇ ಅಲ್ಲ ಯಾರಿಗೂ ಕಾಣಬಾರದು ಎಂದು ಅದರ ಮೇಲೆ ಒಂದೆರಡು ಟಿಶ್ಯು ಪೇಪರ್​ಗಳನ್ನು ಮುಚ್ಚಿದ್ದಾರೆ. ಮಂಜು ಮಾಡಿದ ಕಳ್ಳ ಕೆಲಸದ ಬಗ್ಗೆ ಮನೆ ಮಂದಿಗೆ ಹೇಳೋರ್ಯಾರು ಎನ್ನುವುದು ಸದ್ಯದ ಪ್ರಶ್ನೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮೂರು ವಾರ ಮುಚ್ಚಿಟ್ಟಿದ್ದ ವಿಶೇಷ ಪ್ರತಿಭೆಯನ್ನು ಹೊರ ಹಾಕಿದ ಶಮಂತ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More