AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಲ್ಯಾಗ್​ ಮಂಜು ಬಿಗ್​ ಬಾಸ್​ ವಿನ್ನರ್​; ಶಮಂತ್​ ಶೀಘ್ರವೇ ಔಟ್​! ಹೀಗೆ ಭವಿಷ್ಯ ನುಡಿದಿದ್ದು ಯಾರು?

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಎಲ್ಲ ಸ್ಪರ್ಧಿಗಳ ಆಟದ ಸ್ವರೂಪ ಬದಲಾಗುತ್ತಿದೆ. ಈ ಬಾರಿ ಯಾರು ವಿನ್​ ಆಗುತ್ತಾರೆ ಎಂಬ ಲೆಕ್ಕಾಚಾರ ಈಗಲೇ ಶುರು ಆಗಿದೆ.

BBK8: ಲ್ಯಾಗ್​ ಮಂಜು ಬಿಗ್​ ಬಾಸ್​ ವಿನ್ನರ್​; ಶಮಂತ್​ ಶೀಘ್ರವೇ ಔಟ್​! ಹೀಗೆ ಭವಿಷ್ಯ ನುಡಿದಿದ್ದು ಯಾರು?
ಮಂಜು ಪಾವಗಡ - ಶಮಂತ್​ ಬ್ರೋ ಗೌಡ
ಮದನ್​ ಕುಮಾರ್​
|

Updated on: Mar 22, 2021 | 12:11 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಹಣಾಹಣಿ ನಾಲ್ಕನೇ ವಾರಕ್ಕೆ ಮುಂದುವರಿದಿದೆ. ಮೊದಲ ವಾರ ಧನುಶ್ರೀ, ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹಾಗೂ ಮೂರನೇ ವಾರ ನಟಿ ಗೀತಾ ಭಾರತಿ ಭಟ್​ ಎಲಿಮಿನೇಟ್ ಆದರು. ಸದ್ಯ 14 ಜನರ ನಡುವೆ ಪೈಪೋಟಿ ನಡೆಯುತ್ತಿದೆ. ಎಲ್ಲರೂ ತಮ್ಮದೇ ಸ್ಟ್ರ್ಯಾಟಜಿಗಳ ಮೂಲಕ ಆಟ ಮುಂದುವರಿಸಿದ್ದಾರೆ. ಅಂತಿಮವಾಗಿ ಯಾರು ವಿನ್​ ಆಗಬಹುದು ಎಂಬ ಲೆಕ್ಕಾಚಾರ ಜೋರಾಗಿದೆ.

ಮುಂದಿನ ವಾರ ಶಮಂತ್​ ಬ್ರೋ ಗೌಡ ಔಟ್​ ಆಗುತ್ತಾರೆ. ಫಿನಾಲೆಯಲ್ಲಿ ಮಂಜು ಪಾವಗಡ ವಿನ್ನರ್​ ಆಗುತ್ತಾರೆ ಎಂದು ಭವಿಷ್ಯ ನುಡಿಯಲಾಗಿದೆ. ಅಂದಹಾಗೆ, ಈ ರೀತಿ ಭವಿಷ್ಯ ನುಡಿದಿರುವುದು ಗೀತಾ ಭಾರತಿ ಭಟ್​! ಮಾ.21ರಂದು ಗೀತಾ ಎಲಿಮಿನೇಟ್​ ಆದರು. ನಂತರ ವೇದಿಕೆಗೆ ಬಂದು ಕಿಚ್ಚ ಸುದೀಪ್​ ಜೊತೆ ಅವರು ಕೆಲವು ನಿಮಿಷ ಮಾತನಾಡಿದರು.

ಈ ವೇಳೆ ಗೀತಾಗೆ ಸುದೀಪ್​ ಒಂದು ಪ್ರಶ್ನೆ ಕೇಳಿದ್ದಾರೆ. ಮುಂದಿನ ವಾರ ಹೊರಬರುವುದು ಯಾರು ಹಾಗೂ ಅಂತಿಮವಾಗಿ ವಿನ್​ ಆಗುವುದು ಯಾರು ಎಂಬ ಪ್ರಶ್ನೆಗೆ ಉತ್ತರವಾಗಿ, ಶಮಂತ್​ ಔಟ್​ ಆಗುತ್ತಾರೆ, ಮಂಜು ವಿನ್​ ಆಗುತ್ತಾರೆ ಎಂದು ಗೀತಾ ಹೇಳಿದ್ದಾರೆ. ಅವರು ಹೇಳಿದ್ದು ನಿಜವಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಬಿಗ್​ ಬಾಸ್​ ವೀಕ್ಷಕರಲ್ಲಿ ಮನೆ ಮಾಡಿದೆ.

ಮೂರು ವಾರಗಳ ಕಾಲ ಪೈಪೋಟಿ ನೀಡಿದ ಗೀತಾ ದೊಡ್ಮನೆಯಲ್ಲಿ ಆಗಾಗ ಕಣ್ಣೀರು ಹಾಕುತ್ತಿದ್ದರು. ಅದು ಕೆಲವರಿಗೆ ಕಿರಿಕಿರಿ ಉಂಟುಮಾಡಿತ್ತು. ಅನೇಕ ವಿಚಾರಗಳಿಗೆ ಗೀತಾ ಸಹಜವಾಗಿಯೇ ಎಮೋಷನಲ್​ ಆಗುತ್ತಿದ್ದರು. ಆದರೆ ಅದನ್ನು ಮೊಸಳೆ ಕಣ್ಣೀರು ಎಂದು ಹೇಳಲಾಯಿತು. ಅದೇನೇ ಇದ್ದರೂ ಎಲಿಮಿನೇಟ್​ ಆದಾಗ ಮಾತ್ರ ಗೀತಾ ನಗುಮೊಗದಿಂದಲೇ ಮನೆಯಿಂದ ಹೊರಬಂದಿದ್ದಾರೆ. ಮೂರನೇ ವಾರದ ಎಲಿಮಿನೇಷನ್​ನಲ್ಲಿ ಗೀತಾ ಮತ್ತು ಶಮಂತ್​ ತಲೆ ಮೇಲೆ ತೂಗುಗತ್ತಿ ಇತ್ತು. ಶಮಂತ್​ ಅವರೇ ಔಟ್​ ಆಗುತ್ತಾರೆ ಎಂದು ಅನೇಕರು ಊಹಿಸಿದ್ದರು. ಆದರೆ ಅಂತಿಮವಾಗಿ ಗೀತಾಗೆ ಅದೃಷ್ಟ ಕೈಕೊಟ್ಟಿತು.

‘ಬ್ರಹ್ಮಗಂಟು’ ಸೀರಿಯಲ್​ ಮೂಲಕ ಅವರು ರಾಜ್ಯಾದ್ಯಂತ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಈಗ ಬಿಗ್​ ಬಾಸ್​ನಿಂದಾಗಿ ಅವರ ಖ್ಯಾತಿ ಇನ್ನಷ್ಟು ಹೆಚ್ಚಿದೆ. ಗೀತಾ ಮುಂದಿನ ಪಯಣ ಹೇಗಿರಲಿದೆ ಎಂಬ ನಿರೀಕ್ಷೆ ಅವರ ಅಭಿಮಾನಿಗಳಿಗಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ