AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ […]

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ
ಆಯೇಷಾ ಬಾನು
|

Updated on:Jun 15, 2020 | 11:19 AM

Share

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ.

ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ ಉಲ್ಲಂಘಿಸಿ ಸಚಿವ ಈಶ್ವರಪ್ಪ ಭೇಟಿ ವೇಳೆ ರಾಯರ ಮಠ ಓಪನ್ ಮಾಡಿಸಿದ್ರು.

ಸಚಿವರಿಗೆ ಬೃಂದಾವನ ದರ್ಶನ ಮಾಡಿಸಿದ್ದರು. ಈ ವಿಚಾರವಾಗಿ ಭಾರಿ ವಿವಾದ ಉಂಟಾಗಿತ್ತು. ಇದರ ಬೆನ್ನಲ್ಲೆ ಶ್ರೀಮಠ ನಿನ್ನೆ ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಮಾಡಿದೆ. ವೆಂಕಟೇಶ ಜೋಷಿಯವರನ್ನು ನೂತನ ಮ್ಯಾನೇಜರ್ ಆಗಿ ನೇಮಕ ಮಾಡಿದೆ.ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಹಿಂದೆ ಇನ್ನೂ ಹಲವಾರು ಅನುಮಾನದ ಹುತ್ತ ಬೆಳೆಯುತ್ತಿದೆ ಎಂಬ ಶಂಕೆ ಕೆಲವರಲ್ಲಿ ವ್ಯಕ್ತವಾಗಿದೆ.

Published On - 7:51 am, Mon, 15 June 20

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ