AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಕ್ಕೂ, ನಾಯಿಗಳಿಗೂ ಇದೆಯಾ ಅಮಾವಾಸ್ಯೆ ಸಂಬಂಧ..

ಬೆಂಗಳೂರಿಗರಿಗೆ ಕಂಟಕವಾಗಿರೋ ಬೀದಿನಾಯಿಗಳನ್ನ ಹಿಡಿದು ನಗರ ಹೊರ ವಲಯಕ್ಕೆ ತಂದು ಬಿಡಲಾಗುತ್ತೆ. ಆದ್ರೆ ನಗರದ ಹೊರವಲಯಕ್ಕೆ ಬರುವ ನಾಯಿಗಳಿಗೆ ಹೆದ್ದಾರಿಯೇ ಅಡ್ಡವಾಗಿದೆ. ರಸ್ತೆಯಲ್ಲಿ ಬೇಕಾ ಬಿಟ್ಟಿ ಅಡ್ಡಾಡುವ ಬೀದಿನಾಯಿಗಳಿಂದ ಅಪಘಾತಗಳು ಹೆಚ್ಚುತ್ತಿದ್ದು, ಅಲ್ಲಿನ ಜನ ಅದಕ್ಕೆ ಬೇರೆಯದ್ದೇ ರೂಪ ಕೊಟ್ಟಿದ್ದಾರೆ.

ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಕ್ಕೂ, ನಾಯಿಗಳಿಗೂ ಇದೆಯಾ ಅಮಾವಾಸ್ಯೆ ಸಂಬಂಧ..
ಬೀದಿ ನಾಯಿಗಳ ಉಪಟಳಕ್ಕೆ ಅಮವಾಸ್ಯೆ ಕರಿ ನೆರಳು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Nov 25, 2020 | 10:52 AM

ನೆಲಮಂಗಲ: ವಿಶಾಲವಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸೌಂಡ್‌ ಮಾಡ್ತಾ ಹೋಗ್ತಾ ಇದ್ರೆ, ತಮ್ಮದೇ ಟೀಂ ಕಟ್ಕೊಂಡು ರಸ್ತೆ ಬದಿಯಲ್ಲಿ ರೌಂಡ್ಸ್ ಹಾಕ್ತಾ ಬೀದಿ ನಾಯಿಗಳು ಬೌಬೌ ಅಂತ ಬೊಗಳುತ್ತಿರುತ್ತವೆ. ಈಗ ಅದೇ ನಾಯಿಗಳಿಂದ ಭಾರಿ ಅನಾಹುತಗಳಾಗುತ್ತಿವೆ.

ಬೀದಿ ನಾಯಿಗಳ ಉಪಟಳಕ್ಕೆ ಅಮವಾಸ್ಯೆ ಕರಿ ನೆರಳು: ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರ ವ್ಯಾಪ್ತಿಯ ಅರಿಶಿನಕುಂಟೆ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಹಿಡಿಯುವ ನಾಯಿಗಳನ್ನ, ಈ ಭಾಗದಲ್ಲಿ ತಂದು ಬಿಡಲಾಗುತ್ತೆ. ಹೀಗೆ ಬಿಡೋ ನಾಯಿಗಳು ಹೆದ್ದಾರಿ ಪಕ್ಕ ಅಡ್ಡಾದಿಡ್ಡಿ ಓಡಾಡೋದ್ರಿಂದ ಸಾಕಷ್ಟು ಅಪಘಾತಕ್ಕೆ ಕಾರಣವಾಗುತ್ತಿವೆ. ಅದರಲ್ಲೂ ಅಮಾವಾಸ್ಯೆ ಬಂದ್ರೆ ಸಾಕಂತೆ ಈ ನಾಯಿಗಳಿಂದ ಹೆಚ್ಚು ಹೆಚ್ಚು ಅಪಘಾತಗಳು ಆಗುತ್ತಂತೆ.

ಇನ್ನು ಸ್ಥಳೀಯರು ಹೇಳುವಂತೆ ಅಮಾವಾಸ್ಯೆಗೂ ನಾಯಿಗಳು ಬಂದು ಅಪಘಾತ ಮಾಡೋದಕ್ಕೂ ಯಾವುದೇ ಸಂಬಂಧವಿಲ್ಲ. ಹೆದ್ದಾರಿ ಪಕ್ಕದಲ್ಲಿನ ಮಾಂಸಹಾರಿ ಹೋಟೆಲ್‌ಗಳಲ್ಲಿ, ಢಾಬಾಗಳಲ್ಲಿ ಬಿಸಾಡುವ ಆಹಾರ, ತ್ಯಾಜ್ಯ ತಿನ್ನಲು ನಾಯಿಗಳು ಬರುತ್ತವೆ. ಅಷ್ಟೇ ಅಲ್ಲ ರಸ್ತೆ ಬದಿ ಸುರಿಯುವ ಕೋಳಿ ಕಸ ಹಾಗೂ ಗೃಹೋಪಯೋಗಿ ತ್ಯಾಜ್ಯ ತಿನ್ನಲು ರಸ್ತೆಗೆ ಬರುತ್ತೆ. ಹೀಗೆ ಬರುವ ನಾಯಿಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವುದರಿಂದ ಅಪಘಾತಗಳು ಹೆಚ್ಚಾಗಿ ನಡೆಯುತ್ತೆ. ಅದು ಬಿಟ್ಟರೆ ಅಮಾವಾಸ್ಯೆ ಬರುವುದಕ್ಕೂ, ನಾಯಿಗಳು ಅಡ್ಡ ಬರುವುದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪಶು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ ಕಾಕತಾಳಿಯ ಎಂಬಂತೆ ಅಮಾವಾಸ್ಯೆ ಹಿಂದೆ ಮುಂದೆ ನಾಯಿಗಳಿಂದಲೇ ಅಪಘಾತಗಳು ಹೆಚ್ಚಾಗಿ ನಡೆಯುತ್ತಿದೆ. ಇದರಿಂದ ಸ್ಥಳೀಯರು ಕೂಡ ಭಯಕೊಂಡು ತಮ್ಮದೇ ರೀತಿಯಲ್ಲಿ ಕಲ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟವರು ಎಚ್ಚೆತ್ತು, ನಾಯಿಗಳ ಕಾಟಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ, ಅಪಘಾತಗಳನ್ನು ತಪ್ಪಿಸಬೇಕಿದೆ. -ನೆಲಮಂಗಲ ಮೂರ್ತಿ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ