AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಕ್ಕೂ, ನಾಯಿಗಳಿಗೂ ಇದೆಯಾ ಅಮಾವಾಸ್ಯೆ ಸಂಬಂಧ..

ಬೆಂಗಳೂರಿಗರಿಗೆ ಕಂಟಕವಾಗಿರೋ ಬೀದಿನಾಯಿಗಳನ್ನ ಹಿಡಿದು ನಗರ ಹೊರ ವಲಯಕ್ಕೆ ತಂದು ಬಿಡಲಾಗುತ್ತೆ. ಆದ್ರೆ ನಗರದ ಹೊರವಲಯಕ್ಕೆ ಬರುವ ನಾಯಿಗಳಿಗೆ ಹೆದ್ದಾರಿಯೇ ಅಡ್ಡವಾಗಿದೆ. ರಸ್ತೆಯಲ್ಲಿ ಬೇಕಾ ಬಿಟ್ಟಿ ಅಡ್ಡಾಡುವ ಬೀದಿನಾಯಿಗಳಿಂದ ಅಪಘಾತಗಳು ಹೆಚ್ಚುತ್ತಿದ್ದು, ಅಲ್ಲಿನ ಜನ ಅದಕ್ಕೆ ಬೇರೆಯದ್ದೇ ರೂಪ ಕೊಟ್ಟಿದ್ದಾರೆ.

ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಕ್ಕೂ, ನಾಯಿಗಳಿಗೂ ಇದೆಯಾ ಅಮಾವಾಸ್ಯೆ ಸಂಬಂಧ..
ಬೀದಿ ನಾಯಿಗಳ ಉಪಟಳಕ್ಕೆ ಅಮವಾಸ್ಯೆ ಕರಿ ನೆರಳು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Nov 25, 2020 | 10:52 AM

Share

ನೆಲಮಂಗಲ: ವಿಶಾಲವಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸೌಂಡ್‌ ಮಾಡ್ತಾ ಹೋಗ್ತಾ ಇದ್ರೆ, ತಮ್ಮದೇ ಟೀಂ ಕಟ್ಕೊಂಡು ರಸ್ತೆ ಬದಿಯಲ್ಲಿ ರೌಂಡ್ಸ್ ಹಾಕ್ತಾ ಬೀದಿ ನಾಯಿಗಳು ಬೌಬೌ ಅಂತ ಬೊಗಳುತ್ತಿರುತ್ತವೆ. ಈಗ ಅದೇ ನಾಯಿಗಳಿಂದ ಭಾರಿ ಅನಾಹುತಗಳಾಗುತ್ತಿವೆ.

ಬೀದಿ ನಾಯಿಗಳ ಉಪಟಳಕ್ಕೆ ಅಮವಾಸ್ಯೆ ಕರಿ ನೆರಳು: ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರ ವ್ಯಾಪ್ತಿಯ ಅರಿಶಿನಕುಂಟೆ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಹಿಡಿಯುವ ನಾಯಿಗಳನ್ನ, ಈ ಭಾಗದಲ್ಲಿ ತಂದು ಬಿಡಲಾಗುತ್ತೆ. ಹೀಗೆ ಬಿಡೋ ನಾಯಿಗಳು ಹೆದ್ದಾರಿ ಪಕ್ಕ ಅಡ್ಡಾದಿಡ್ಡಿ ಓಡಾಡೋದ್ರಿಂದ ಸಾಕಷ್ಟು ಅಪಘಾತಕ್ಕೆ ಕಾರಣವಾಗುತ್ತಿವೆ. ಅದರಲ್ಲೂ ಅಮಾವಾಸ್ಯೆ ಬಂದ್ರೆ ಸಾಕಂತೆ ಈ ನಾಯಿಗಳಿಂದ ಹೆಚ್ಚು ಹೆಚ್ಚು ಅಪಘಾತಗಳು ಆಗುತ್ತಂತೆ.

ಇನ್ನು ಸ್ಥಳೀಯರು ಹೇಳುವಂತೆ ಅಮಾವಾಸ್ಯೆಗೂ ನಾಯಿಗಳು ಬಂದು ಅಪಘಾತ ಮಾಡೋದಕ್ಕೂ ಯಾವುದೇ ಸಂಬಂಧವಿಲ್ಲ. ಹೆದ್ದಾರಿ ಪಕ್ಕದಲ್ಲಿನ ಮಾಂಸಹಾರಿ ಹೋಟೆಲ್‌ಗಳಲ್ಲಿ, ಢಾಬಾಗಳಲ್ಲಿ ಬಿಸಾಡುವ ಆಹಾರ, ತ್ಯಾಜ್ಯ ತಿನ್ನಲು ನಾಯಿಗಳು ಬರುತ್ತವೆ. ಅಷ್ಟೇ ಅಲ್ಲ ರಸ್ತೆ ಬದಿ ಸುರಿಯುವ ಕೋಳಿ ಕಸ ಹಾಗೂ ಗೃಹೋಪಯೋಗಿ ತ್ಯಾಜ್ಯ ತಿನ್ನಲು ರಸ್ತೆಗೆ ಬರುತ್ತೆ. ಹೀಗೆ ಬರುವ ನಾಯಿಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವುದರಿಂದ ಅಪಘಾತಗಳು ಹೆಚ್ಚಾಗಿ ನಡೆಯುತ್ತೆ. ಅದು ಬಿಟ್ಟರೆ ಅಮಾವಾಸ್ಯೆ ಬರುವುದಕ್ಕೂ, ನಾಯಿಗಳು ಅಡ್ಡ ಬರುವುದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪಶು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ ಕಾಕತಾಳಿಯ ಎಂಬಂತೆ ಅಮಾವಾಸ್ಯೆ ಹಿಂದೆ ಮುಂದೆ ನಾಯಿಗಳಿಂದಲೇ ಅಪಘಾತಗಳು ಹೆಚ್ಚಾಗಿ ನಡೆಯುತ್ತಿದೆ. ಇದರಿಂದ ಸ್ಥಳೀಯರು ಕೂಡ ಭಯಕೊಂಡು ತಮ್ಮದೇ ರೀತಿಯಲ್ಲಿ ಕಲ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟವರು ಎಚ್ಚೆತ್ತು, ನಾಯಿಗಳ ಕಾಟಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ, ಅಪಘಾತಗಳನ್ನು ತಪ್ಪಿಸಬೇಕಿದೆ. -ನೆಲಮಂಗಲ ಮೂರ್ತಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ