AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Market Bloodbath: ಷೇರುಪೇಟೆ ಕುಸಿತ; ಕರಗಿತು ಹೂಡಿಕೆದಾರರ 3.7 ಲಕ್ಷ ಕೋಟಿ ಸಂಪತ್ತು

ದೇಶದ ವಿವಿಧ ಭಾಗಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿ, ಎರಡನೇ ಅಲೆಯ ಆತಂಕದಲ್ಲಿ ಹೂಡಿಕೆದಾರರು ಇದ್ದಾರೆ. ಆ ಹಿನ್ನೆಲೆಯಲ್ಲಿ ಸೆನ್ಸೆಕ್ಸ್ 1,145 ಪಾಯಿಂಟ್ ಅಥವಾ 2.25 ಪರ್ಸೆಂಟ್ ಕೆಳಗಿಳಿಯಿತು.

Market Bloodbath: ಷೇರುಪೇಟೆ ಕುಸಿತ; ಕರಗಿತು ಹೂಡಿಕೆದಾರರ 3.7 ಲಕ್ಷ ಕೋಟಿ ಸಂಪತ್ತು
ಷೇರು ಮಾರುಕಟ್ಟೆ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Feb 22, 2021 | 7:54 PM

ಮುಂಬೈ: ಭಾರತದ ಷೇರು ಮಾರ್ಕೆಟ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸೋಮವಾರ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಬಿಎಸ್​ಇ ಲಿಸ್ಟೆಡ್ ಷೇರುಗಳು 3.72 ಲಕ್ಷ ಕೋಟಿ ರೂಪಾಯಿ ನಷ್ಟ ಕಂಡಿದ್ದು, ಹೂಡಿಕೆದಾರರ 3.7 ಲಕ್ಷ ಕೋಟಿ ರೂಪಾಯಿಯಷ್ಟು ಸಂಪತ್ತು ಕೊಚ್ಚಿ ಹೋಗಿದೆ.

ದೇಶದ ವಿವಿಧ ಭಾಗಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿ, ಎರಡನೇ ಅಲೆಯ ಆತಂಕದಲ್ಲಿ ಹೂಡಿಕೆದಾರರು ಇದ್ದಾರೆ. ಆ ಹಿನ್ನೆಲೆಯಲ್ಲಿ ಸೆನ್ಸೆಕ್ಸ್ 1,145 ಪಾಯಿಂಟ್ ಅಥವಾ 2.25 ಪರ್ಸೆಂಟ್ ಕೆಳಗಿಳಿದು, 49,744.32 ಪಾಯಿಂಟ್ ನಲ್ಲಿ ವ್ಯವಹಾರ ಮುಗಿಸಿದೆ.

ನಿಫ್ಟಿ 306 ಪಾಯಿಂಟ್ ಅಥವಾ 2.04 ಪರ್ಸೆಂಟ್ ಇಳಿಕೆಯಾಗಿ, 14,675.70 ಪಾಯಿಂಟ್​ನೊಂದಿಗೆ ವಹಿವಾಟು ಮುಗಿಸಿದೆ. ಒಟ್ಟಾರೆಯಾಗಿ ಬಿಎಸ್​ಇ ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಬಂಡವಾಳ 203.98 ಲಕ್ಷ ಕೋಟಿ ರೂಪಾಯಿಯಿಂದ 200.26 ಲಕ್ಷ ಕೋಟಿಗೆ ಇಳಿದಿದ್ದು, ಹೂಡಿಕೆದಾರರು 3.7 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ.

ಡಿಸೆಂಬರ್ 21, 2020ರಂದು 1407 ಪಾಯಿಂಟ್ ಕುಸಿತ ಕಂಡಿತ್ತು ಸೆನ್ಸೆಕ್ಸ್. ಆ ನಂತರ ಒಂದು ದಿನದಲ್ಲಿ ಕಾಣುತ್ತಿರುವ ಅತಿ ದೊಡ್ಡ ಇಳಿಕೆ ಇದಾಗಿದೆ. 2015ರಿಂದ ಈಚೆಗೆ 18 ಬಾರಿ ಸೆನ್ಸೆಕ್ಸ್ 1000ಕ್ಕೂ ಹೆಚ್ಚು ಪಾಯಿಂಟ್ ಕುಸಿದಿದೆ. ಅದರಲ್ಲೂ 1979ರ ನಂತರ ಒಂದೇ ದಿನದಲ್ಲಿ ಮಾರ್ಕೆಟ್ ಅತಿ ಹೆಚ್ಚು ನಷ್ಟ ಕಂಡಿದ್ದು ಮಾರ್ಚ್ 23, 2020ರಲ್ಲಿ.

ದಿನಾಂಕ ಕುಸಿತ
23/3/2020 3,934.72
12/3/2020 2,919.26
16/3/2020 2713.41
4/5/2020 2002.27
9/3/2020 1941.67
18/3/2020 1709.58
24/8/2015 1624.51
28/2/2020 1448.37
21/1/2008 1408.35
21/12/2020 1406.73

ಸೋಮವಾರ ನಿಫ್ಟಿಯಲ್ಲಿ ಇಳಿಕೆ ಕಂಡ ಟಾಪ್ 5 ಕಂಪೆನಿಗಳು

ಮಹೀಂದ್ರಾ ಅಂಡ್ ಮಹೀಂದ್ರಾ – ಶೇ 4.79

ಡಾ. ರೆಡ್ಡೀಸ್ ಲ್ಯಾಬ್ಸ್ – ಶೇ 4.53

ಟೆಕ್ ಮಹೀಂದ್ರಾ – ಶೇ 4.35

ಐಟಿಸಿ – ಶೇ 4.12

ಇಂಡಸ್ ಇಂಡ್ ಬ್ಯಾಂಕ್ – ಶೇ 4.03

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ