AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗಿದ್ರೂ ಪರಪುರುಷನ ಜತೆ ಲವ್ವಿಡವ್ವಿ.. ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಪ್ರಿಯಕರನ ಕೈಯಿಂದಲೇ ಕೊಲೆ

ಆಕೆ ವಿವಾಹಿತೆ.. ಪ್ರೀತಿಸಿಯೇ ಅವನ ಜತೆ ಏಳು ಹೆಜ್ಜೆ ಹಾಕಿದ್ದಳು. ಸಂಸಾರ ಸುಖಮಯವಾಗಿ ಸಾಗುತ್ತಿತ್ತು. ಆದ್ರೆ ಸಂಸಾರ ದೋಣಿ ಸಾಗಿಸೋದು ಕಷ್ಟಕರ ಅನ್ಕೋಂಡು ದುಡಿಮೆಗಾಗಿ ಪತಿ ಬೇರೆ ಊರಿಗೆ ಹೋಗಿದ್ದಷ್ಟೇ, ಬಳಿಕ ನಡೆದಿದ್ದೆಲ್ಲಾ ಥೇಟ್ ಸಿನಿಮಾ ಸ್ಪೋರಿ.

ಮದ್ವೆಯಾಗಿದ್ರೂ ಪರಪುರುಷನ ಜತೆ ಲವ್ವಿಡವ್ವಿ.. ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಪ್ರಿಯಕರನ ಕೈಯಿಂದಲೇ ಕೊಲೆ
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸ್
ಆಯೇಷಾ ಬಾನು
ಆಯೇಷಾ ಬಾನು|

Updated on:Mar 17, 2021 | 9:42 AM

Share

ಹುಬ್ಬಳ್ಳಿ: 32 ವರ್ಷ ವಯಸ್ಸಿನ ರೇಣುಕಾ ಎಂಬ ಮಹಿಳೆ ಹುಬ್ಬಳ್ಳಿಯ ಹನಮಂತನಗರದಲ್ಲಿರುವ ತನ್ನ ಮನೆಯಲ್ಲೇ ಮಲಗಿದ್ದ ಚಾಪೆ ಮೇಲೆಯೇ ಹೆಣವಾಗಿ ಬಿದ್ದಿದ್ದಾಳೆ. ಈಕೆಯ ಪ್ರಿಯಕರ ಮಹಾದೇವ್‌ ಈಕೆಯನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ನಾಟಕವಾಡಿದ್ದ. ಆದ್ರೆ ಅನುಮಾನಗೊಂಡ ಪೊಲೀಸರು ಮಹಾದೇವ್‌ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ.

ಮೊನ್ನೆ ರಾತ್ರಿಯಿಡಿ ರೇಣುಕಾಳ ಜತೆಯಲ್ಲಿ ಜಗಳವಾಡಿದ್ದ ಮಹಾದೇವ್, ಅವಳನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ನಂತ್ರ ಫ್ಯಾನ್‌ಗೆ ನೇತು ಹಾಕಬೇಕು ಅಂತಾ ಪ್ರಯತ್ನಪಟ್ಟು ವಿಫಲನಾಗಿದ್ದಾನೆ. ಬೆಳಗಿನ ಜಾವ ಪಕ್ಕದ ಮನೆಯವರಿಗೆ ಹೋಗಿ, ರೇಣುಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಕರೆದಿದ್ದಾನೆ.

ಆತ್ಮಹತ್ಯೆ ಅಂತ ಬಿಂಬಿಸಲು ಹೊರಟವ ಖಾಕಿ ಬಲೆಗೆ ರೇಣುಕಾಳನ್ನ ನೋಡಲು ಬಂದಿದ್ದ ಪಕ್ಕದ ಮನೆಯವರಿಗೆ ಹೆಣ ನೋಡಿ ಅನುಮಾನ ಬಂದಿದೆ. ಇದು ಪಕ್ಕಾ ಕೊಲೆ ಅಂತಾ ನಿರ್ಧರಿಸಿ, ರೇಣುಕಾ ಮಕ್ಕಳನ್ನ ವಿಚಾರಿಸಿದ್ದಾರೆ. ನಿನ್ನೆ ರಾತ್ರಿ ನಡೆದ ಘಟನೆ ಬಗ್ಗೆ ಮಕ್ಕಳು ವಿವರಿಸಿದ್ದಾರೆ. ತಕ್ಷಣ ಗ್ರಾಮಸ್ಥರು ವಿದ್ಯಾನಗರ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಬಂದು ಮಹಾದೇವನಿಗೆ ಬಿಸಿ ಮುಟ್ಟಿಸಿದಾಗ ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

ಇನ್ನು ಪ್ರೀತಿಸಿ ಮದುವೆಯಾಗಿದ್ದ ರೇಣುಕಾ ಗಂಡ ಪರ ಊರಿಗೆ ದುಡಿಮೆಗೆ ಹೋಗಿದ್ದ. ಆಗ ಕಾರ್‌ ಡ್ರೈವರ್‌ ಮಹದೇವ್‌ ಜೊತೆ ರೇಣುಕಾ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದಳು. ಗಂಡನಿಗೆ ಈ ವಿಷ್ಯ ಗೊತ್ತಾಗಿ ಇವರ ಪಾಡಿಗೆ ಇವರನ್ನ ಬಿಟ್ಟು ಆತ ಬೇರೆ ಕಡೆ ಇದ್ದ. ನಂತ್ರ ರೇಣುಕಾ ಮತ್ತು ಮಹಾದೇವ್ ಕಳೆದ ಒಂದೂವರೆ ವರ್ಷದಿಂದ ಜತೆಯಲ್ಲಿ ಸಂಸಾರ ಮಾಡ್ತಿದ್ರು. ಆದ್ರೆ ಮೊನ್ನೆ ರಾತ್ರಿ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ವಿದ್ಯಾನಗರ ಪೋಲಿಸರು, ಗಂಡನಿಗೂ ವಿಚಾರ ಮುಟ್ಟಿಸಿದ್ದಾರೆ. ಆರೋಪಿ ಮಹಾದೇವ್‌ನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಆದ್ರೆ ಏನೂ ತಪ್ಪು ಮಾಡದ ಮಕ್ಕಳು ಮಾತ್ರ ಅನಾಥರಾಗಿದ್ದಾರೆ.

ಇದನ್ನೂ ಓದಿ: ಜೆ.ಸಿ. ರಸ್ತೆ: ಪರಪುರುಷನೊಂದಿಗೆ ಲಾಡ್ಜ್​ಗೆ ಹೋದ ಮಹಿಳೆ ಶವವಾಗಿ ಪತ್ತೆ, ಶಂಕಿತ ಹಂತಕ ಅರೆಸ್ಟ್

Published On - 8:16 am, Tue, 16 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!