AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಲ್ಲಿ ಮಣ್ಣಾದ ಚಿನ್ನದ ನಾಡಿನ ವೀರ ಯೋಧ ಪ್ರಶಾಂತ್

ಕೋಲಾರ: ಉಗ್ರರ ವಿರುದ್ಧ ಹೋರಾಡಿ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಯೋಧ ಪ್ರಶಾಂತ್(25) ಅಂತ್ಯಕ್ರಿಯೆ ಬಂಗಾರಪೇಟೆಯ ಕಣಿಂಬೆಲೆ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಭೋವಿ ಸಮುದಾಯದ ಸಂಪ್ರದಾಯದಂತೆ ಹುತಾತ್ಮ ಯೋಧ ಪ್ರಶಾಂತ್ ಅಂತ್ಯಸಂಸ್ಕಾರ ನಡೆದಿದ್ದು, ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ರು. ಫೆ.26ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರರ ಜೊತೆ ನಡೆದ ಫೈರಿಂಗ್​ನಲ್ಲಿ ಯೋಧ ಪ್ರಶಾಂತ್ ಹುತಾತ್ಮರಾಗಿದ್ದರು. ಇವರು ಸೆವೆಂಟೀನ್ ಮದ್ರಾಸ್ ರೆಜಿಮೆಂಟ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ತಡರಾತ್ರಿ ಬಂಗಾರಪೇಟೆಯಲ್ಲಿ ಯೋಧನ ಪಾರ್ಥಿವ ಶರೀರವನ್ನು ನೂರಾರು ಜನ ಬರಮಾಡಿಕೊಂಡರು. ನಂತರ ನಗರದ […]

ಮಣ್ಣಲ್ಲಿ ಮಣ್ಣಾದ ಚಿನ್ನದ ನಾಡಿನ ವೀರ ಯೋಧ ಪ್ರಶಾಂತ್
ಸಾಧು ಶ್ರೀನಾಥ್​
|

Updated on: Feb 29, 2020 | 4:16 PM

Share

ಕೋಲಾರ: ಉಗ್ರರ ವಿರುದ್ಧ ಹೋರಾಡಿ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಯೋಧ ಪ್ರಶಾಂತ್(25) ಅಂತ್ಯಕ್ರಿಯೆ ಬಂಗಾರಪೇಟೆಯ ಕಣಿಂಬೆಲೆ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಭೋವಿ ಸಮುದಾಯದ ಸಂಪ್ರದಾಯದಂತೆ ಹುತಾತ್ಮ ಯೋಧ ಪ್ರಶಾಂತ್ ಅಂತ್ಯಸಂಸ್ಕಾರ ನಡೆದಿದ್ದು, ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ರು.

ಫೆ.26ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರರ ಜೊತೆ ನಡೆದ ಫೈರಿಂಗ್​ನಲ್ಲಿ ಯೋಧ ಪ್ರಶಾಂತ್ ಹುತಾತ್ಮರಾಗಿದ್ದರು. ಇವರು ಸೆವೆಂಟೀನ್ ಮದ್ರಾಸ್ ರೆಜಿಮೆಂಟ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ತಡರಾತ್ರಿ ಬಂಗಾರಪೇಟೆಯಲ್ಲಿ ಯೋಧನ ಪಾರ್ಥಿವ ಶರೀರವನ್ನು ನೂರಾರು ಜನ ಬರಮಾಡಿಕೊಂಡರು. ನಂತರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಬಳಿಕ ಬಂಗಾರಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10 ಗಂಟೆವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.

ಜಿಲ್ಲೆಯ ಗಣ್ಯರಿಂದ ಅಂತಿಮ ನಮನ: ಸಂಸದ ಮುನಿಸ್ವಾಮಿ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಮಾಲೂರು ಶಾಸಕ ನಂಜೇಗೌಡ, ಮಾಜಿ ಶಾಸಕರಾದ ವೆಂಕಟಮುನಿಯಪ್ಪ, ಎಂ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ದರ್ಶನ್, ಎಸ್​ಪಿ ಮೊಹಮದ್ ಸುಜೀತ, ಎಸಿ ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದರು.

ತೆರೆದ ವಾಹನದಲ್ಲಿ ಮೆರೆವಣಿಗೆ: ಅಂತಿಮ ದರ್ಶನದ ಬಳಿಕ ಬಂಗಾರಪೇಟೆಯಿಂದ ಯೋಧನ ಹುಟ್ಟೂರು ಕಣಿಂಬೆಲೆ ಗ್ರಾಮದವರೆಗೆ ತೆರದ‌ ವಾಹನದಲ್ಲಿ ಹುತಾತ್ಮ ಯೋಧನ ಪಾರ್ಥಿವ ಶರೀರದ ಅದ್ದೂರಿ ಮೆರವಣಿಗೆ ಮಾಡಲಾಯ್ತು. ಅಂತಿಮ ಯಾತ್ರೆಯಲ್ಲಿ ಜಿಲ್ಲೆಯ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು. ದಾರಿಯುದ್ದಕ್ಕೂ ಸಾವಿರಾರು ಜನರು ಹಾಗೂ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ