ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಸಜ್ಜನ ಬೊಮ್ಮನಹಳ್ಳಿ ಅಧಿಕಾರ ಅಂತ್ಯ

ಬೆಳಗಾವಿ: ನೂತನ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಎಂ.ಜಿ.ಹಿರೇಮಠ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಸೇವಾ ನಿವೃತ್ತಿ ಹೊಂದಿದ ಕಾರಣ ಎಂ.ಜಿ.ಹಿರೇಮಠ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಡಿಸಿ ಎಂ.ಜಿ.ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ. ನಾನು ಬೆಳಗಾವಿ ಜಿಲ್ಲೆಯವನೇ ಆಗಿದ್ದು ಎಲ್ಲರ ಪರಿಚಯವಿದೆ, ಕೆಲಸ ಸುಲಭವಾಗಲಿದೆ ಎಂದು ಅಧಿಕಾರ ಸ್ವೀಕರಿಸಿದ ಬಳಿಕ ಎಂ.ಜಿ.ಹಿರೇಮಠ ಅವರು ಹೇಳಿದರು. ಗದಗ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಿಸಿದ ಅನುಭವ ಇದೆ. ಕೊರೊನಾ, ನೆರೆ, ಬರ ಸೇರಿ ಎಲ್ಲ […]

ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಸಜ್ಜನ ಬೊಮ್ಮನಹಳ್ಳಿ ಅಧಿಕಾರ ಅಂತ್ಯ
ಸಾಧು ಶ್ರೀನಾಥ್​ Edited By:

Updated on: Jun 30, 2020 | 7:19 PM

ಬೆಳಗಾವಿ: ನೂತನ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಎಂ.ಜಿ.ಹಿರೇಮಠ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಸೇವಾ ನಿವೃತ್ತಿ ಹೊಂದಿದ ಕಾರಣ ಎಂ.ಜಿ.ಹಿರೇಮಠ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ನೂತನ ಡಿಸಿ ಎಂ.ಜಿ.ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ. ನಾನು ಬೆಳಗಾವಿ ಜಿಲ್ಲೆಯವನೇ ಆಗಿದ್ದು ಎಲ್ಲರ ಪರಿಚಯವಿದೆ, ಕೆಲಸ ಸುಲಭವಾಗಲಿದೆ ಎಂದು ಅಧಿಕಾರ ಸ್ವೀಕರಿಸಿದ ಬಳಿಕ ಎಂ.ಜಿ.ಹಿರೇಮಠ ಅವರು ಹೇಳಿದರು.

ಗದಗ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಿಸಿದ ಅನುಭವ ಇದೆ. ಕೊರೊನಾ, ನೆರೆ, ಬರ ಸೇರಿ ಎಲ್ಲ ಪರಿಸ್ಥಿತಿ ನಿಭಾಯಿಸಿದ ಅನುಭವ ನನಗಿದೆ. ಆ ಅನುಭವ ಬೆಳಗಾವಿ ಜಿಲ್ಲೆಯಲ್ಲಿ ಸಹಕಾರಿಯಾಗಲಿದೆ ಎಂದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us