AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ

ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ
ದಾಖಲೆ ಬರೆದ ಶ್ರೀನಿವಾಸ ಗೌಡ
Follow us
Skanda
|

Updated on:Mar 20, 2021 | 5:51 PM

ಮಂಗಳೂರು: ಕಂಬಳದಲ್ಲಿ ಅತಿ ವೇಗವಾಗಿ ಓಡುವ ಮೂಲಕ ಕಳೆದ ಬಾರಿ ದಾಖಲೆ ಬರೆದಿದ್ದ ಮಿಜಾರು ಶ್ರೀನಿವಾಸ ಗೌಡ, ಈ ವರ್ಷ ತನ್ನ ಹಳೆಯ ದಾಖಲೆಯನ್ನೇ ಮುರಿದುಹಾಕಿದ್ದಾರೆ. ವೇಣೂರುನಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ ಶ್ರೀನಿವಾಸ ಗೌಡ ಹೊಸ ದಾಖಲೆ ನಿರ್ಮಿಸಿದ್ದು, 100 ಮೀಟರ್ ದೂರವನ್ನು ಕೇವಲ 8.96 ಸೆಕೆಂಡ್​ಗಳಲ್ಲಿ ತಲುಪಿದ್ದಾರೆ. ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಅಂದಹಾಗೆ ಕಳೆದ ವರ್ಷ ಐಕಳದಲ್ಲಿ ನಡೆದ ಕಂಬಳದಲ್ಲಿ ಶ್ರೀನಿವಾಸ ಗೌಡ 100 ಮೀಟರ್‌ ಅಂತರವನ್ನು 9.55 ಸೆಕೆಂಡ್‌ನಲ್ಲಿ ಕ್ರಮಿಸಿ ದಾಖಲೆ ಬರೆದಿದ್ದರು. ಅದಾದ ನಂತರ ಕಳೆದ ವರ್ಷದ ವೇಣೂರು ಕಂಬಳದಲ್ಲಿ ಈ ದಾಖಲೆ ಮುರಿದಿದ್ದ ಬಜಗೋಳಿ ನಿಶಾಂತ್‌ ಶೆಟ್ಟಿ ಎನ್ನುವವರು 100 ಮೀಟರ್‌ ಅಂತರವನ್ನು 9.52 ಸೆಕೆಂಡ್‌ನಲ್ಲಿ ಕ್ರಮಿಸಿದ್ದರು. ಅಲ್ಲದೇ ಬೈಂದೂರು ವಿಶ್ವನಾಥ ದೇವಾಡಿಗ ಎಂಬುವವರು ಈ ವರ್ಷ ನಡೆದ ಐಕಳ ಕಂಬಳದಲ್ಲಿ 100 ಮೀಟರ್ ಅನ್ನು 9.15 ಸೆಕೆಂಡ್‌ನಲ್ಲಿ ಕ್ರಮಿಸಿ ಇಬ್ಬರ ದಾಖಲೆಯನ್ನೂ ಬದಿಗೊತ್ತಿ ಹೊಸ ದಾಖಲೆ ಬರೆದಿದ್ದರು. ಆದರೆ, ಇದೀಗ ಈ ದಾಖಲೆಯನ್ನೂ ಪುಡಿಗಟ್ಟಿ ಮತ್ತೆ ಶ್ರೀನಿವಾಸ ಗೌಡ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​ 

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

Published On - 5:36 pm, Sat, 20 March 21

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ