AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ

ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ
ದಾಖಲೆ ಬರೆದ ಶ್ರೀನಿವಾಸ ಗೌಡ
Skanda
|

Updated on:Mar 20, 2021 | 5:51 PM

Share

ಮಂಗಳೂರು: ಕಂಬಳದಲ್ಲಿ ಅತಿ ವೇಗವಾಗಿ ಓಡುವ ಮೂಲಕ ಕಳೆದ ಬಾರಿ ದಾಖಲೆ ಬರೆದಿದ್ದ ಮಿಜಾರು ಶ್ರೀನಿವಾಸ ಗೌಡ, ಈ ವರ್ಷ ತನ್ನ ಹಳೆಯ ದಾಖಲೆಯನ್ನೇ ಮುರಿದುಹಾಕಿದ್ದಾರೆ. ವೇಣೂರುನಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ ಶ್ರೀನಿವಾಸ ಗೌಡ ಹೊಸ ದಾಖಲೆ ನಿರ್ಮಿಸಿದ್ದು, 100 ಮೀಟರ್ ದೂರವನ್ನು ಕೇವಲ 8.96 ಸೆಕೆಂಡ್​ಗಳಲ್ಲಿ ತಲುಪಿದ್ದಾರೆ. ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಅಂದಹಾಗೆ ಕಳೆದ ವರ್ಷ ಐಕಳದಲ್ಲಿ ನಡೆದ ಕಂಬಳದಲ್ಲಿ ಶ್ರೀನಿವಾಸ ಗೌಡ 100 ಮೀಟರ್‌ ಅಂತರವನ್ನು 9.55 ಸೆಕೆಂಡ್‌ನಲ್ಲಿ ಕ್ರಮಿಸಿ ದಾಖಲೆ ಬರೆದಿದ್ದರು. ಅದಾದ ನಂತರ ಕಳೆದ ವರ್ಷದ ವೇಣೂರು ಕಂಬಳದಲ್ಲಿ ಈ ದಾಖಲೆ ಮುರಿದಿದ್ದ ಬಜಗೋಳಿ ನಿಶಾಂತ್‌ ಶೆಟ್ಟಿ ಎನ್ನುವವರು 100 ಮೀಟರ್‌ ಅಂತರವನ್ನು 9.52 ಸೆಕೆಂಡ್‌ನಲ್ಲಿ ಕ್ರಮಿಸಿದ್ದರು. ಅಲ್ಲದೇ ಬೈಂದೂರು ವಿಶ್ವನಾಥ ದೇವಾಡಿಗ ಎಂಬುವವರು ಈ ವರ್ಷ ನಡೆದ ಐಕಳ ಕಂಬಳದಲ್ಲಿ 100 ಮೀಟರ್ ಅನ್ನು 9.15 ಸೆಕೆಂಡ್‌ನಲ್ಲಿ ಕ್ರಮಿಸಿ ಇಬ್ಬರ ದಾಖಲೆಯನ್ನೂ ಬದಿಗೊತ್ತಿ ಹೊಸ ದಾಖಲೆ ಬರೆದಿದ್ದರು. ಆದರೆ, ಇದೀಗ ಈ ದಾಖಲೆಯನ್ನೂ ಪುಡಿಗಟ್ಟಿ ಮತ್ತೆ ಶ್ರೀನಿವಾಸ ಗೌಡ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​ 

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

Published On - 5:36 pm, Sat, 20 March 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!