AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ

ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ
ದಾಖಲೆ ಬರೆದ ಶ್ರೀನಿವಾಸ ಗೌಡ
Skanda
|

Updated on:Mar 20, 2021 | 5:51 PM

Share

ಮಂಗಳೂರು: ಕಂಬಳದಲ್ಲಿ ಅತಿ ವೇಗವಾಗಿ ಓಡುವ ಮೂಲಕ ಕಳೆದ ಬಾರಿ ದಾಖಲೆ ಬರೆದಿದ್ದ ಮಿಜಾರು ಶ್ರೀನಿವಾಸ ಗೌಡ, ಈ ವರ್ಷ ತನ್ನ ಹಳೆಯ ದಾಖಲೆಯನ್ನೇ ಮುರಿದುಹಾಕಿದ್ದಾರೆ. ವೇಣೂರುನಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ ಶ್ರೀನಿವಾಸ ಗೌಡ ಹೊಸ ದಾಖಲೆ ನಿರ್ಮಿಸಿದ್ದು, 100 ಮೀಟರ್ ದೂರವನ್ನು ಕೇವಲ 8.96 ಸೆಕೆಂಡ್​ಗಳಲ್ಲಿ ತಲುಪಿದ್ದಾರೆ. ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಅಂದಹಾಗೆ ಕಳೆದ ವರ್ಷ ಐಕಳದಲ್ಲಿ ನಡೆದ ಕಂಬಳದಲ್ಲಿ ಶ್ರೀನಿವಾಸ ಗೌಡ 100 ಮೀಟರ್‌ ಅಂತರವನ್ನು 9.55 ಸೆಕೆಂಡ್‌ನಲ್ಲಿ ಕ್ರಮಿಸಿ ದಾಖಲೆ ಬರೆದಿದ್ದರು. ಅದಾದ ನಂತರ ಕಳೆದ ವರ್ಷದ ವೇಣೂರು ಕಂಬಳದಲ್ಲಿ ಈ ದಾಖಲೆ ಮುರಿದಿದ್ದ ಬಜಗೋಳಿ ನಿಶಾಂತ್‌ ಶೆಟ್ಟಿ ಎನ್ನುವವರು 100 ಮೀಟರ್‌ ಅಂತರವನ್ನು 9.52 ಸೆಕೆಂಡ್‌ನಲ್ಲಿ ಕ್ರಮಿಸಿದ್ದರು. ಅಲ್ಲದೇ ಬೈಂದೂರು ವಿಶ್ವನಾಥ ದೇವಾಡಿಗ ಎಂಬುವವರು ಈ ವರ್ಷ ನಡೆದ ಐಕಳ ಕಂಬಳದಲ್ಲಿ 100 ಮೀಟರ್ ಅನ್ನು 9.15 ಸೆಕೆಂಡ್‌ನಲ್ಲಿ ಕ್ರಮಿಸಿ ಇಬ್ಬರ ದಾಖಲೆಯನ್ನೂ ಬದಿಗೊತ್ತಿ ಹೊಸ ದಾಖಲೆ ಬರೆದಿದ್ದರು. ಆದರೆ, ಇದೀಗ ಈ ದಾಖಲೆಯನ್ನೂ ಪುಡಿಗಟ್ಟಿ ಮತ್ತೆ ಶ್ರೀನಿವಾಸ ಗೌಡ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​ 

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

Published On - 5:36 pm, Sat, 20 March 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?