Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಯುವ ಜನಾಂಗ ಸಂಪೂರ್ಣವಾಗಿ ಸಮತೋಲನ ಕಳೆದು ಕೊಳ್ತಿದೆ’

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಜೋರಾಗಿದೆ. ಪೊಲೀಸರು ಇದರ ಜಾಡು ಹಿಡಿದು, ಇದರ ಹಿಂದಿರುವ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಈಗ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಹಾಗೂ ಕೇರಳ ಮೂಲದ ನಾಲ್ವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಿ LSD, MDMA ಡ್ರಗ್ ಸೀಜ್ ಮಾಡಿದ್ದಾರೆ. ಶಹದ್ ಮೊಹಮ್ಮದ್, ಅಜ್ಮಲ್, ಅಜಿನ್ ಕೆಜಿವರ್ಗೇಶ್, ನಿತಿನ್ ಮೋಹನ್ ಸೇರಿದಂತೆ ಕೇರಳ ಮೂಲದ […]

’ಯುವ ಜನಾಂಗ ಸಂಪೂರ್ಣವಾಗಿ ಸಮತೋಲನ ಕಳೆದು ಕೊಳ್ತಿದೆ’
Follow us
ಆಯೇಷಾ ಬಾನು
| Updated By:

Updated on:Jul 30, 2020 | 9:08 PM

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಜೋರಾಗಿದೆ. ಪೊಲೀಸರು ಇದರ ಜಾಡು ಹಿಡಿದು, ಇದರ ಹಿಂದಿರುವ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಈಗ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಹಾಗೂ ಕೇರಳ ಮೂಲದ ನಾಲ್ವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಿ LSD, MDMA ಡ್ರಗ್ ಸೀಜ್ ಮಾಡಿದ್ದಾರೆ. ಶಹದ್ ಮೊಹಮ್ಮದ್, ಅಜ್ಮಲ್, ಅಜಿನ್ ಕೆಜಿವರ್ಗೇಶ್, ನಿತಿನ್ ಮೋಹನ್ ಸೇರಿದಂತೆ ಕೇರಳ ಮೂಲದ ನಾಲ್ವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಕಿಂಗ್ ಪಿನ್ ಧೀರಜ್​ಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

ಕಿಂಗ್ ಪಿನ್ ಧೀರಜ್​ಗಾಗಿ ಹುಡುಕಾಟ ಆರೋಪಿಗಳು ಕಿಂಗ್ ಪಿನ್ ಧೀರಜ್ ಹೇಳಿದಂತೆ ಡ್ರಗ್ ಡೀಲ್ ಮಾಡ್ತಿದ್ದರು. ಧೀರಜ್ ನೆದರ್‌ಲ್ಯಾಂಡ್, ಜರ್ಮನಿಯಿಂದ ಪೋಸ್ಟಲ್ ಮೂಲಕ ಡ್ರಗ್ಸ್‌ ತರಿಸ್ತಿದ್ದ. ತನ್ನ ಹುಡುಗರ ಮೂಲಕ ಡ್ರಗ್ಸ್‌ ರಿಸೀವ್ ಮಾಡಿಸಿಕೊಂಡು ಮಾರಾಟ ಮಾಡ್ತಿದ್ದ. ಯಾರಿಗೆ ಡ್ರಗ್ಸ್‌ ಮಾರಾಟ ಮಾಡ್ಬೇಕು ಅಂತಾ ಮೆಸೇಜ್ ಕೊಡ್ತಿದ್ದ. ಕಾಲು ಇಂಚು ಇರೊ ಪೇಪರ್​ನ ಕಡಿಮೆ ಅಂದ್ರೆ ಐದು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಇನ್ನೂ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಡಿಜೆಗಳಲ್ಲಿ ಹೆಚ್ಚಾಗಿ ಎಲ್​​ಎಸ್​ಡಿ ಮಾರಾಟ ಮಾಡ್ತಿದ್ದರು. ಸದ್ಯ ಈಗ ಕಿಂಗ್ ಪಿನ್ ಧೀರಜ್​ಗಾಗಿ ಬಲೆ ಬೀಸಲಾಗಿದೆ.

ಯುವ ಜನಾಂಗ ಸಂಪೂರ್ಣವಾಗಿ ಸಮತೋಲನ ಕಳೆದು ಕೊಳ್ತಿದೆ ಮಾದಕ ವಸ್ತುಗಳ ಸೇವನೆಯಿಂದ ಯುವ ಜನಾಂಗ ಸಂಪೂರ್ಣವಾಗಿ ಸಮತೋಲನ ಕಳೆದು ಕೊಳ್ತಿದೆ. ಇಡೀ ಸಮಾಜಕ್ಕೆ ಈ ವಸ್ತು ಮಾರಕವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಮಾದಕವಸ್ತು ಜಾಲಕ್ಕೆ ಬ್ರೇಕ್ ಹಾಕಲು ಸೂಚಿಸಿದ್ದಾರೆ.

ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ರಾಜ್ಯದ ಪ್ರಮುಖ ನಗರಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ಈ ವರ್ಷ ಜೂನ್ ಅಂತ್ಯದ ವೇಳೆಗೆ 533 ಕೇಸ್ ದಾಖಲಾಗಿದೆ. 14 ವಿದೇಶಿಯರು ಸೇರಿ 799 ಆರೋಪಿಗಳ ಬಂಧನವಾಗಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ರು.

Published On - 11:47 am, Wed, 29 July 20

ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ