AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್

ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್
ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ
ಆಯೇಷಾ ಬಾನು
|

Updated on: Mar 14, 2021 | 10:00 AM

Share

ಬೆಂಗಳೂರು: ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ ಕಾರ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದು ಅಜ್ಜ ಡಂಗುರ ಬಾರಿಸಿದ್ದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಜಾನಪದ ಕಲಾವಿದ ವೀರಪ್ಪ ಕಾಳಿ ಕೊರೊನಾ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದಾರೆ. ಕೂಗಿ ಹೇಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಈಗ ಆ ವಿಡಿಯೋವನ್ನು ಸಚಿವ ಡಾ.ಕೆ.ಸುಧಾಕರ್ ತಮ್ಮ ಟ್ವಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡುವ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗ್ರಾಮೀಣ ಸಾಂಪ್ರದಾಯಕ ಪದ್ಧತಿ ಮೂಲಕ ಡಂಗುರ ಬಾರಿಸಿ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣೆದಾಯಕವಾಗಿದೆ ಅಂತ ಸಚಿವ ಸುಧಾಕರ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೇಳ್ರಪ್ಪೋ ಕೇಳಿ! ಕೊರೊನಾ ಕಟ್ಟಿಹಾಕಲು ಬಂತು ‘ಒಗ್ಗರಣೆ ವ್ರತ’ ದಿಗ್ಬಂಧನ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ