AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್

ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜನ ಕಾರ್ಯಕ್ಕೆ ಮೆಚ್ಚುಗೆ, ಪ್ರಧಾನಿಗೆ ವಿಡಿಯೋ ಟ್ಯಾಗ್ ಮಾಡಿದ ಸಚಿವ ಡಾ.ಕೆ.ಸುಧಾಕರ್
ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 14, 2021 | 10:00 AM

Share

ಬೆಂಗಳೂರು: ಕೊವಿಡ್ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದ ಅಜ್ಜ ವೀರಪ್ಪ ಕಾರ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದು ಅಜ್ಜ ಡಂಗುರ ಬಾರಿಸಿದ್ದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಅಜ್ಜ ವೀರಪ್ಪ ಎನ್ನುವವರು ಡಂಗುರ ಬಾರಿಸಿ ಕೊರೊನಾ ಲಸಿಕೆಯನ್ನು ಪಡೆಯುವಂತೆ ಸಂದೇಶ ಸಾರಿದ್ದರು. ಈ ಬಗ್ಗೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.

ಜಾನಪದ ಕಲಾವಿದ ವೀರಪ್ಪ ಕಾಳಿ ಕೊರೊನಾ ಲಸಿಕೆ ಪಡೆಯುವಂತೆ ಡಂಗುರ ಬಾರಿಸಿದ್ದಾರೆ. ಕೂಗಿ ಹೇಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಈಗ ಆ ವಿಡಿಯೋವನ್ನು ಸಚಿವ ಡಾ.ಕೆ.ಸುಧಾಕರ್ ತಮ್ಮ ಟ್ವಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡುವ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗ್ರಾಮೀಣ ಸಾಂಪ್ರದಾಯಕ ಪದ್ಧತಿ ಮೂಲಕ ಡಂಗುರ ಬಾರಿಸಿ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣೆದಾಯಕವಾಗಿದೆ ಅಂತ ಸಚಿವ ಸುಧಾಕರ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೇಳ್ರಪ್ಪೋ ಕೇಳಿ! ಕೊರೊನಾ ಕಟ್ಟಿಹಾಕಲು ಬಂತು ‘ಒಗ್ಗರಣೆ ವ್ರತ’ ದಿಗ್ಬಂಧನ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ