AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಗರದ ಹಳೇ ಕುಂದುವಾಡ ಬಳಿಯಿರುವ NH 4 ನಲ್ಲಿ ನಡೆದಿದೆ. ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಪ್ರಶಾಂತ್​ ಪತ್ನಿ ಅಂಚಲ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡೊಡ್ಡ ಅನಾಹುತದಿಂದ ಪಾರಾದಂತಾಗಿದೆ. NH 4ನ ಡಿವೈಡರ್ ಬಳಿ KA 05 AR 6577 ನಂಬರ್​ ಲಾರಿ ಹಾಗೂ ಶೆಟ್ಟರ್​ರ KA 03 NE 8 ನಂಬರ್​ನ ಲ್ಯಾಂಡ್ ರೋವರ್ ಕಾರ್ ನಡುವೆ […]

ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ
ಪೃಥ್ವಿಶಂಕರ
|

Updated on:Nov 10, 2020 | 5:18 PM

Share

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಗರದ ಹಳೇ ಕುಂದುವಾಡ ಬಳಿಯಿರುವ NH 4 ನಲ್ಲಿ ನಡೆದಿದೆ.

ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಪ್ರಶಾಂತ್​ ಪತ್ನಿ ಅಂಚಲ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡೊಡ್ಡ ಅನಾಹುತದಿಂದ ಪಾರಾದಂತಾಗಿದೆ. NH 4ನ ಡಿವೈಡರ್ ಬಳಿ KA 05 AR 6577 ನಂಬರ್​ ಲಾರಿ ಹಾಗೂ ಶೆಟ್ಟರ್​ರ KA 03 NE 8 ನಂಬರ್​ನ ಲ್ಯಾಂಡ್ ರೋವರ್ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ದಾವಣಗೆರೆಯಿಂದ ತಮ್ಮ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಾಕ್ಕಾಗಮಿಸಿದ ದಕ್ಷಿಣ ಸಂಚಾರ ಪೊಲೀಸ್ ಠಾಣೆ PSI ಕಿರಣ್ ಕುಮಾರ್ ಭೇಟಿ ನೀಡಿ, ಪರಿಶೀಲ‌ನೆ ನಡೆಸಿದ್ದಾರೆ.

Published On - 5:11 pm, Tue, 10 November 20

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More