AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JC Madhuswamy ‘ಸಿದ್ದರಾಮಯ್ಯನವ್ರು ಏನು‌ ಬೇಕಾದ್ರೂ ತಿನ್ನಬಹುದು; ಈ ದೇಶದಲ್ಲಿ ಪೂಜೆ, ಊಟ ವೈಯಕ್ತಿಕ ಹಕ್ಕು’

ಈ ದೇಶದಲ್ಲಿ ಪೂಜೆ ಹಾಗೂ ಊಟ ಅವರವರ ವೈಯಕ್ತಿಕ ಹಕ್ಕು. ಸಿದ್ರಾಮಯ್ಯನವರು ಏನು‌ ಬೇಕಾದ್ರೂ ತಿನ್ನಬಹುದು ಅದು ಅವರಿಗೆ ಬಿಟ್ಟಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಗೋಮಾಂಸ ಹೇಳಿಕೆಗೆ ನಗರದಲ್ಲಿ ಸಣ್ಣ ನೀರಾವರಿ ಇಲಾಖೆ ಸಚಿವ J.C. ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

JC Madhuswamy ‘ಸಿದ್ದರಾಮಯ್ಯನವ್ರು ಏನು‌ ಬೇಕಾದ್ರೂ ತಿನ್ನಬಹುದು; ಈ ದೇಶದಲ್ಲಿ ಪೂಜೆ, ಊಟ ವೈಯಕ್ತಿಕ ಹಕ್ಕು’
J.C. ಮಾಧುಸ್ವಾಮಿ
KUSHAL V
| Edited By: |

Updated on: Feb 16, 2021 | 6:15 PM

Share

ಬಾಗಲಕೋಟೆ: ಈ ದೇಶದಲ್ಲಿ ಪೂಜೆ ಹಾಗೂ ಊಟ ಅವರವರ ವೈಯಕ್ತಿಕ ಹಕ್ಕು. ಸಿದ್ರಾಮಯ್ಯನವರು ಏನು‌ ಬೇಕಾದ್ರೂ ತಿನ್ನಬಹುದು. ಅದು ಅವರಿಗೆ ಬಿಟ್ಟಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಗೋಮಾಂಸ ಹೇಳಿಕೆಗೆ ನಗರದಲ್ಲಿ ಸಣ್ಣ ನೀರಾವರಿ ಇಲಾಖೆ ಸಚಿವ J.C. ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ನಾವು ಗೋ ಹತ್ಯೆ ನಿಷೇಧ ಶಾಸನ ತಂದಿದ್ದು ಈಗಲ್ಲ. 1964ರಿಂದಲೇ ಈ ಕಾಯ್ದೆ ಜಾರಿಯಲ್ಲಿತ್ತು. 13 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ಜಾನುವಾರುಗಳನ್ನು ಕೊಲ್ಲಬಹುದು ಅಂತಾ ಕಾಯ್ದೆ ಇತ್ತು. ಆದ್ರೆ, ಅದು ಅಮಾನುಷವಾಗಿದೆ. ಹಾಗಾಗಿ, ನಾವು ತಿದ್ದುಪಡಿ ಮಾಡಿದ್ದೀವಿ ಎಂದು ಮಾಧುಸ್ವಾಮಿ ಹೇಳಿದರು.

ಆದರೆ, ಬೇಕಾದ್ರೆ ಎಮ್ಮೆ ಮಾಂಸ ತಿನ್ನಲು ಬಳಸಿಕೊಳ್ಳಬಹುದು ಅಂತಾ ಮಾಡಿದ್ದೀವಿ. ಅಂದು, ಯಾರ ಮೇಲೂ ಲೀಗಲ್ ಆಗಿ ನಾವು ಆಕ್ಷನ್ ತಗೆದುಕೊಳ್ಳಲು ಆಗ್ತಿರಲಿಲ್ಲ. ಯಾರೋ ಹಸು ಕದಿಯೋದು ಹೀಗೆ ಹಲವಾರು ಸಮಸ್ಯೆಗಳು ಎದುರಾಗುತ್ತಿದ್ದವು. ಹೀಗಾಗಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಿ, ತಹಶೀಲ್ದಾರ್, ಪಶುಸಂಗೋಪನಾ ಇಲಾಖೆ ಅಧಿಕಾರಿ ಹಾಗೂ ಪೋಲಿಸರನ್ನ ನೇಮಿಸಿ ಅಂಥ ಪ್ರಕರಣಗಳನ್ನು ಇತ್ಯರ್ಥ ಮಾಡಲು ಕಾನೂನಿನಲ್ಲಿ ಅವಕಾಶ ಮಾಡಿಕೊಟ್ಟಿದ್ದೀವಿ. 13 ವರ್ಷದ ನಂತರದ ವಯಸ್ಸಿನ ಹಸುವನ್ನ ಕೊಲ್ಲಬೇಕೆಂಬುದನ್ನ ಬ್ಯಾನ್ ಮಾಡಿ, ತಿದ್ದುಪಡಿ ಮಾಡಿದ್ದೀವಿ ಅಷ್ಟೇ ಎಂದು ಮಾಧುಸ್ವಾಮಿ ಹೇಳಿದರು.

‘ದಿಶಾ ರವಿ ಬಂಧನಕ್ಕೆ ನಮ್ಮದು ಯಾವುದೇ ಆಕ್ರೋಶವಿಲ್ಲ’ ದಿಶಾ ರವಿ ಬಂಧನಕ್ಕೆ ನಮ್ಮದು ಯಾವುದೇ ಆಕ್ರೋಶವಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಯಾವುದೋ ಮೂಲ ಸಿಕ್ಕಾಗ ತನಿಖೆ ನಡೆಸುವುದು ಸಹಜ. ತನಿಖಾ ಸಂಸ್ಥೆಗಳು ವಶಕ್ಕೆ ಪಡೆದು ವಿಚಾರಣೆ ಸಹಜ. ದಿಶಾ ರವಿ ಯಾರು ಅಂತಾ ಅಮಿತ್ ಶಾಗೆ ಗೊತ್ತಿತ್ತಾ? ಏನೋ ಒಂದು ಮಾಹಿತಿ ಮೇಲೆ ತನಿಖೆ ನಡೆಯುತ್ತಿದೆ. ಕಾಂಗ್ರೆಸ್​ನವರು ಏಕೆ ರಾಜಕಾರಣ ಮಾಡ್ತಿದ್ದಾರೋ ಗೊತ್ತಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

‘ಯಾರೇ ಮೀಸಲಾತಿ ಕೇಳಿದರೂ ಆಯೋಗಕ್ಕೆ ಶಿಫಾರಸು’ ಮೀಸಲಾತಿಗಾಗಿ ವಿವಿಧ ಸಮುದಾಯಗಳ ಹೋರಾಟ ವಿಚಾರವಾಗಿ ಮೀಸಲಾತಿ ಯಾರಿಗೆ ಕೊಡ್ಬೇಕು, ಕೊಡ್ಬಾರದೆಂದು ತೀರ್ಮಾನ ಕೈಗೊಳ್ಳಲು ಹಿಂದುಳಿದ ವರ್ಗಗಳ ಆಯೋಗವಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಯಾರೇ ಮೀಸಲಾತಿ ಕೇಳಿದರೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸು ಹೋಗುತ್ತದೆ. ಸಾಧಕ ಬಾಧಕ ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಿಲಿದೆ. ಆಯೋಗ ವರದಿ ನೀಡಿದ ನಂತರ ನಾವು ನೋಡಬಹುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

‘3 ಬಾರಿ ನನ್ನ ಖಾತೆ ಬದಲಿದರೂ ನನಗೆ ನನ್ನ ಖಾತೆ ಸಿಕ್ಕಿತು..’ ಒಂದು ವಾರದಲ್ಲೇ ಮೂರು ಬಾರಿ ನನ್ನ ಖಾತೆ ಬದಲಿಸಿದ್ರು. ಹೀಗಾಗಿ ಖಾತೆ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಂತರ ನನಗೆ ನನ್ನ ಖಾತೆ ಸಿಕ್ಕಿತು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಾಮಿ ಹೇಳಿದರು.

ಇದನ್ನೂ ಓದಿ: ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ: ವಿವಾದಿತ ಹೇಳಿಕೆ ನೀಡಿದ ಸಿದ್ದರಾಮಯ್ಯ!

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ