ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, AEE ಅಮಾನತಿಗೆ ಸಚಿವ ಸೂಚನೆ

ಚಿಕ್ಕಬಳ್ಳಾಪುರ: ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ, ಚಿಕ್ಕಬಳ್ಳಾಪುರ KRDLನ AEE ಮುನೀರ್ ಅವರನ್ನು ಅಮಾನತು ಮಾಡುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. 2017ರ ಹಣ ನೀಡಿದ್ರೂ ಇದುವರೆಗೂ ಕಾಮಗಾರಿ ಅನುಷ್ಠಾನ ಮಾಡಿಲ್ಲವೆಂದು AEE ಮುನೀರ್ ಮೇಲೆ ಅಸಮಾಧಾನಗೊಂಡ ಸಚಿವ ಡಾ. ಸುಧಾಕರ್, ಇಂದು ನಡೆದ ತಾ.ಪಂ. ಪ್ರಗತಿ ಪರಿಶೀಲನಾ ಸಭೆಯಲ್ಲಿ AEE ಮುನೀರ್ ಅಮಾನತ್ತಿಗೆ ಸೂಚನೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಈ ಸಂಬಂಧ ಜಿಲ್ಲಾಧಿಕಾರಿ ಲತಾ […]

ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, AEE ಅಮಾನತಿಗೆ ಸಚಿವ ಸೂಚನೆ
ಸಾಧು ಶ್ರೀನಾಥ್​

Updated on: Sep 02, 2020 | 5:38 PM

ಚಿಕ್ಕಬಳ್ಳಾಪುರ: ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಿಂದಾಗಿ, ಚಿಕ್ಕಬಳ್ಳಾಪುರ KRDLನ AEE ಮುನೀರ್ ಅವರನ್ನು ಅಮಾನತು ಮಾಡುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.
2017ರ ಹಣ ನೀಡಿದ್ರೂ ಇದುವರೆಗೂ ಕಾಮಗಾರಿ ಅನುಷ್ಠಾನ ಮಾಡಿಲ್ಲವೆಂದು AEE ಮುನೀರ್ ಮೇಲೆ ಅಸಮಾಧಾನಗೊಂಡ ಸಚಿವ ಡಾ. ಸುಧಾಕರ್, ಇಂದು ನಡೆದ ತಾ.ಪಂ. ಪ್ರಗತಿ ಪರಿಶೀಲನಾ ಸಭೆಯಲ್ಲಿ AEE ಮುನೀರ್ ಅಮಾನತ್ತಿಗೆ ಸೂಚನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಈ ಸಂಬಂಧ ಜಿಲ್ಲಾಧಿಕಾರಿ ಲತಾ ಅವರ ಜೊತೆ ಮಾತನಾಡಿದ್ದು, ಮುನೀರ್ ಅಮಾನತಿಗೆ ಸೂಚಿಸಿದ್ದಾರೆ. ಈ ಮಧ್ಯೆ, ನನ್ನ ಅಮಾನತಿಗೆ ಸೂಚನೆ ನೀಡದಂತೆ AEE ಮುನೀರ್, ಸಚಿವ ಡಾ. ಸುಧಾಕರ್ ಬಳಿ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us