ಧಮ್ ಬಗ್ಗೆ ಮಾತನಾಡೋಕೆ ಅವರಿಗೆ ಯೋಗ್ಯತೆಯಿಲ್ಲ -ಕೆ.ಎಸ್​.ಈಶ್ವರಪ್ಪ

ಚಾಮರಾಜನಗರ: ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ತಾರೆ. ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತರು. ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಜೆಪಿ, ಬಿಜೆಪಿ ಇಬ್ಬಾಗ ಕಾರಣ. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆದರು. ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಧಮ್ ಇದ್ದ […]

ಧಮ್ ಬಗ್ಗೆ ಮಾತನಾಡೋಕೆ ಅವರಿಗೆ ಯೋಗ್ಯತೆಯಿಲ್ಲ -ಕೆ.ಎಸ್​.ಈಶ್ವರಪ್ಪ
ಸಾಧು ಶ್ರೀನಾಥ್​ Edited By:

Updated on: Jun 20, 2020 | 1:52 PM

ಚಾಮರಾಜನಗರ: ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ತಾರೆ. ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತರು. ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಜೆಪಿ, ಬಿಜೆಪಿ ಇಬ್ಬಾಗ ಕಾರಣ. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆದರು. ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಮ್ ಇದ್ದ ವ್ಯಕ್ತಿ ಯಾಕೆ ಚುನಾವಣೆಯಲ್ಲಿ ಸೋತರು. ಸಿಎಂ ಸ್ಥಾನವನ್ನು ಏಕೆ ಸಿದ್ದರಾಮಯ್ಯ ಕಳೆದುಕೊಂಡರು. ಧಮ್ ಇರೋ ವ್ಯಕ್ತಿ ಯಾಕೆ ಕುರುಬ ಸಮುದಾಯಕ್ಕೆ ಟಿಕೆಟ್ ಕೊಟ್ಟಿಲ್ಲ. ಧಮ್ ಬಗ್ಗೆ ಮಾತನಾಡುವಂತಹ ಯೋಗ್ಯತೆ ಅವರಿಗಿಲ್ಲ ಎಂದು ಬಿಎಸ್‌ವೈಗೆ ಧಮ್ ಇಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು.

Published On - 1:52 pm, Sat, 20 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us