AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಹಿಂದುತ್ವದ ಕೇಂದ್ರ, ಇಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಮರಿಗೆ ಟಿಕೆಟ್ ಕೊಡಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಬೆಳಗಾವಿ ಲೋಕಸಭಾ ಟಿಕೆಟ್ ಮುಸಲ್ಮಾನರಿಗಂತೂ ಕೊಡಲ್ಲ ಎಂದ ಕೆ.ಎಸ್.ಈಶ್ವರಪ್ಪ, ಬೆಳಗಾವಿ ಹಿಂದೂತ್ವದ ಕೇಂದ್ರ, ಇಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಮರಿಗೆ ಟಿಕೆಟ್ ಕೊಡೋ‌ ಪ್ರಶ್ನೆ ಬರಲ್ಲ ಎಂದರು.

ಬೆಳಗಾವಿ ಹಿಂದುತ್ವದ ಕೇಂದ್ರ, ಇಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಮರಿಗೆ ಟಿಕೆಟ್ ಕೊಡಲ್ಲ: ಸಚಿವ ಕೆ.ಎಸ್. ಈಶ್ವರಪ್ಪ
ಕೆ.ಎಸ್ .ಈಶ್ವರಪ್ಪ
ಪೃಥ್ವಿಶಂಕರ
|

Updated on:Nov 28, 2020 | 3:12 PM

Share

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಕುರುಬ ಸಮುದಾಯಕ್ಕೆ ನೀಡಬೇಕೆಂಬ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಬಿಜೆಪಿಯಲ್ಲಿ ಕುರುಬ ಸಮಾಜ, ಲಿಂಗಾಯತ ಸಮಾಜ, ಒಕ್ಕಲಿಗ ಸಮಾಜ, ಬ್ರಾಹ್ಮಣ ಸಮಾಜ ಅಂತಾ ಪ್ರಶ್ನೆ ಇಲ್ಲ. ಕಾಂಗ್ರೆಸ್ ಪಕ್ಷದವರು ಕುರುಬರಿಗೆ ಬಹಳ ಟಿಕೆಟ್ ಕೊಟ್ರಲ್ಲ ಎಷ್ಟು ಗೆದ್ರು? ಕಾಂಗ್ರೆಸ್‌ನವರು ಈಶ್ವರಪ್ಪ ಎಷ್ಟು ಕೊಟ್ರು ಅಂತಾ ಕೇಳಿದರಲ್ಲ ನಾನು ಕುರುಬರಿಗೆ ಮೂರು ಟಿಕೆಟ್ ಕೊಟ್ಟಿದೀನಿ. ಡಿಪಾಜಿಟ್ ಕಳೆದುಕೊಳ್ಳೋಕೆ ಟಿಕೆಟ್ ಕೊಡಬೇಕೇನು? ಎಂದು ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.

ಬೆಳಗಾವಿ ಲೋಕಸಭಾ ಟಿಕೆಟ್ ಮುಸಲ್ಮಾನರಿಗಂತೂ ಕೊಡಲ್ಲ.. ಬೆಳಗಾವಿ ಲೋಕಸಭಾ ಟಿಕೆಟ್ ಮುಸಲ್ಮಾನರಿಗಂತೂ ಕೊಡಲ್ಲ ಎಂದ ಕೆ.ಎಸ್.ಈಶ್ವರಪ್ಪ, ಬೆಳಗಾವಿ ಹಿಂದುತ್ವದ ಕೇಂದ್ರ. ಇಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಮರಿಗೆ ಟಿಕೆಟ್ ಕೊಡೋ‌ ಪ್ರಶ್ನೆ ಬರಲ್ಲ ಎಂದರು. ಜೊತೆಗೆ ಬೆಳಗಾವಿ ಲೋಕಸಭಾ ಟಿಕೆಟ್ ಹಿಂದುತ್ವವಾದಿಗಳಿಗೆ ಕೊಡ್ತೀವಿ ಎಂದರು.

ಸಿದ್ದರಾಮಯ್ಯ ಅವರ ಬಗ್ಗೆ ಮಾತಾನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಅವರ ವರ್ಚಸ್ಸು ಎಲ್ಲಿದೆ, ಆರ್ ಆರ್ ನಗರ ಶಿರಾ ಕ್ಷೇತ್ರದಲ್ಲಿ ಏನಾಯ್ತು? ಈಗಲೂ ಸಿಎಂ.. ಮುಂದೆಯೂ ಸಿಎಂ ಅಂತಾ ಸಿದ್ದರಾಮಯ್ಯ ಹೇಳಿದ್ದರು. ಈಗ ಎಲ್ಲಿದಾರೆ? ಬದಾಮಿಯಲ್ಲಿ ಹೆಚ್ಚು ಕಡಿಮೆ ಆಗಿದ್ರೆ ರಾಜಕಾರಣದಲ್ಲಿಯೇ ಇರ್ತಿರಲಿಲ್ಲ ಅವರು. ರಾಜಕೀಯವಾಗಿ ನಾವು ಬದುಕಿದ್ದೀವಿ ಅಂತಾ ತೋರಿಸೋಕೆ ಏನೇನೋ ಹೇಳಿಕೆ ಕೊಡ್ತಿದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಖಾರವಾಗಿಯೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಡಿಕೆಶಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು -ವಿಡಿಯೋ ಹೇಳಿಕೆಗೆ ಈಶ್ವರಪ್ಪ ತಿರುಗೇಟು

Published On - 2:25 pm, Sat, 28 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!