AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ‌ ಹಿಂದೆ HDK ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ, ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ -ನಾರಾಯಣಗೌಡ

ಹೆಚ್.ಡಿ. ಕುಮಾರಸ್ವಾಮಿ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ ಎಂದು ಮಂಡ್ಯ ಜಿಲ್ಲೆ K.R.ಪೇಟೆಯಲ್ಲಿ ಸಚಿವ ನಾರಾಯಣಗೌಡ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಈ‌ ಹಿಂದೆ HDK ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ, ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ -ನಾರಾಯಣಗೌಡ
ಸಚಿವ ನಾರಾಯಣಗೌಡ
ಆಯೇಷಾ ಬಾನು
| Edited By: |

Updated on: Dec 14, 2020 | 3:02 PM

Share

ಮಂಡ್ಯ: ಈ‌ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಿಂದೆಲ್ಲಾ ಹೊಡೆಸಿದ್ದಾರೆ ಎಂದು ಮಂಡ್ಯ ಜಿಲ್ಲೆ K.R. ಪೇಟೆಯಲ್ಲಿ ಸಚಿವ ನಾರಾಯಣಗೌಡ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಬಿಜೆಪಿ ಜತೆ ಜೆಡಿಎಸ್ ಪಕ್ಷದ ವಿಲೀನ ವದಂತಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ನಾರಾಯಣಗೌಡ, HD ಕುಮಾರಸ್ವಾಮಿ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಈ ಬಗ್ಗೆ ಮಂಡ್ಯದಲ್ಲಿ ನಾಲ್ಕು ಜನರ ಜೊತೆ ಮಾತನಾಡಿದ್ದಾರೆ.

ಯಡಿಯೂರಪ್ಪರನ್ನ ಅವರು ಟಚ್ ಸಹ ಮಾಡಲು ಸಾಧ್ಯವಿಲ್ಲ: ನಾನು ಸಿಎಂ ಆಗುತ್ತೇನೆ, ನಿಮ್ಮನ್ನ ಮಂತ್ರಿ ಮಾಡ್ತೇನೆ ಅಂದಿದ್ದಾರೆ. ಹೀಗೆ ಅಂದುಕೊಂಡರೆ ಅದು ಕುಮಾರಸ್ವಾಮಿಯವರ ಭ್ರಮೆ. ವಿಲೀನ ವಿಚಾರ ಮೇಲ್ಮಟ್ಟಕ್ಕೆ ಬಿಟ್ಟಿದ್ದು, ಬಿಜೆಪಿಗೆ ಇದರ ಅಗತ್ಯವಿಲ್ಲ, ಬಿಜೆಪಿಗೆ 120 ಸೀಟ್‌ಗಳು ಇವೆ. ಯಡಿಯೂರಪ್ಪರನ್ನ ಅವರು ಟಚ್ ಸಹ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಇನ್ನು ಈ‌ ಹಿಂದೆ ಕುಮಾರಸ್ವಾಮಿ ನಮಗೆ ಸಾಕಷ್ಟು ನೋವು ಕೊಟ್ಟಿದ್ದಾರೆ. ನಮಗೆ ಚಪ್ಪಲಿಯಲ್ಲೆಲ್ಲ ಹೊಡೆಸಿದ್ದಾರೆ. ಅವರು ನಾನೀಗ ಸಿಎಂ ಆಗ್ತೀನಿ ಅಂದುಕೊಂಡರೆ ಅದು ಅವರ ಭ್ರಮೆ. ಆ ಭ್ರಮೆಯಿಂದ ಕುಮಾರಸ್ವಾಮಿ ಮೊದಲು ಹೊರಬರಬೇಕು.

ಅವರಿಗೆ ಪವರ್ ಇದ್ದಾಗ ಏನೂ ಮಾಡಲಿಲ್ಲ. ಈಗ ಪವರ್ ಇಲ್ಲ. ಆದ್ರೂ ಅದು ಇದು ಅಂತಾ ಮಾತಾಡುತ್ತಾರೆ. JDS ಹೆಸರಿನಲ್ಲಿ ನಿಂತ್ರೆ ಕೆ.ಆರ್.ಪೇಟೆಯಲ್ಲಿ ಒಂದು ಚಿಕ್ಕ ಮಗು ಕೂಡ ಗೆಲ್ಲುತ್ತ ಅಂತಿದ್ರು. ಈಗ ಅವರ ಮಗ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಆ ನೋವು ಅವರಿಗೆ ಇದೆ ಎಂದು ನಾರಾಯಣಗೌಡ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ನಾಮಪತ್ರ ಸಲ್ಲಿಸಿದ ನಾರಾಯಣ ಗೌಡಗೆ ಚಪ್ಪಲಿ ಎಸೆತ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ