AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ‘ನಮ್ಮ ಏರಿಯಾ’ಗೆ ಬರುತ್ತಾ? ಮಳೆ ಸಂಕಷ್ಟದಲ್ಲೂ ‘ಸಾಮ್ರಾಟ್​’ರಿಗೆ ವ್ಯಾಪ್ತಿ ಗೊಂದಲ!

ಬೆಂಗಳೂರು: ರಾತ್ರಿ ಸುರಿದ ಮಳೆಗೆ ಹೊಸಕೆರೆ ಹಳ್ಳಿ ಮತ್ತು ದತ್ತಾತ್ರೇಯ ಲೇಔಟ್​ನಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಸಿಎಂ ಭೇಟಿ ಮಾಡಲಿರುವ ಸಚಿವ ಅಶೋಕ್ ಸಿಎಂಗೆ ಮಳೆ ಹಾನಿ ಪ್ರದೇಶಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾಹಿತಿ ನೀಡಿ, ಪರಿಹಾರ ಕ್ರಮದ ಬಗ್ಗೆ ಅಶೋಕ್ ಚರ್ಚೆ ನಡೆಸಲಿದ್ದಾರೆ. ಇಂಟರೆಸ್ಟಿಂಗ್​ ಸುದ್ದಿಯೆಂದರೆ ಸಚಿವರು ಭೇಟಿ ಕೊಟ್ಟ ವೇಳ ಕೊಂಚ ಕನ್ಫ್ಯೂಸ್​ ಆಗಿಹೋದರು. ಇದು ನಮ್ಮ […]

ಇದು ‘ನಮ್ಮ ಏರಿಯಾ’ಗೆ ಬರುತ್ತಾ? ಮಳೆ ಸಂಕಷ್ಟದಲ್ಲೂ ‘ಸಾಮ್ರಾಟ್​’ರಿಗೆ ವ್ಯಾಪ್ತಿ ಗೊಂದಲ!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 24, 2020 | 12:12 PM

Share

ಬೆಂಗಳೂರು: ರಾತ್ರಿ ಸುರಿದ ಮಳೆಗೆ ಹೊಸಕೆರೆ ಹಳ್ಳಿ ಮತ್ತು ದತ್ತಾತ್ರೇಯ ಲೇಔಟ್​ನಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಸಿಎಂ ಭೇಟಿ ಮಾಡಲಿರುವ ಸಚಿವ ಅಶೋಕ್ ಸಿಎಂಗೆ ಮಳೆ ಹಾನಿ ಪ್ರದೇಶಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾಹಿತಿ ನೀಡಿ, ಪರಿಹಾರ ಕ್ರಮದ ಬಗ್ಗೆ ಅಶೋಕ್ ಚರ್ಚೆ ನಡೆಸಲಿದ್ದಾರೆ.

ಇಂಟರೆಸ್ಟಿಂಗ್​ ಸುದ್ದಿಯೆಂದರೆ ಸಚಿವರು ಭೇಟಿ ಕೊಟ್ಟ ವೇಳ ಕೊಂಚ ಕನ್ಫ್ಯೂಸ್​ ಆಗಿಹೋದರು. ಇದು ನಮ್ಮ ಏರಿಯಾಗೆ ಬರುತ್ತಾ ಅಥವಾ RR ನಗರಕ್ಕೆ ಸೇರುತ್ತಾ ಅಂತಾ ಸ್ಥಳೀಯ ಮಾಜಿ ಕಾರ್ಪೋರೇಟರ್ ಪತಿ ರಾಜೇಶ್ವರಿ ಚೋಳರಾಜ ಬಳಿ ಅಶೋಕ್​ ಪ್ರಶ್ನೆ ಮಾಡಿದರಂತೆ.

ಅದಕ್ಕೆ ಮಾಜಿ ಕಾರ್ಪೋರೇಟರ್ ಪತಿ ಇದು ನಮ್ಮ ಏರಿಯಾನೆ ಸಾರ್ ಅಂತಾ ಸಚಿವರಿಗೆ ಕನ್ಫರ್ಮ್​ ಮಾಹಿತಿ ಕೊಟ್ಟರಂತೆ. ಜೊತೆಗೆ, ಬೆಳಗ್ಗೆಯಿಂದ ಊಟ ಕೊಟ್ಟಿದ್ದೀವಿ, ನೀರು ಕೊಟ್ಟಿದ್ದೀ ಅಂತಾ ಮಾಹಿತಿ ಸಹ ಹೇಳಿದರಂತೆ.

ಅದೇ ವೇಳೆ, ಸಾರ್ ನಮ್ಮ ಮನೆ ನೋಡಿ ಅಂತಾ ಕೆಲ ಹಿರಿಯರು ಸಚಿವ ಆರ್ ಅಶೋಕ್​ಗೆ ಕೇಳಿಕೊಂಡರು. ಆಗ, ಕಾಂಪೌಂಡ್ ಹೊರ ಭಾಗದಿಂದಲೇ ಸಚಿವರು ನೋಡಿ ಹೊರಟು ಹೋದರು. ಈ ನಡುವೆ, ಅಕ್ಕಪಕ್ಕದ ಮನೆಯವರು ಸಾರ್ ಸಾರ್ ಅಂತಾ ಕೂಗಾಡಿದ್ರು ಸಚಿವರು ಜಾಣ ಕಿವುಡುತನ ತೋರಿ ಅಲ್ಲಿಂದ ಕಾಲ್ಕಿತ್ತರು.

ಯಾವುದೇ ಮನೆಯ ಒಳಗೆ ಹೋಗದೆ ಕೇವಲ ರೋಡ್ ಮಾತ್ರ ವೀಕ್ಷಣೆ ಮಾಡ್ತಿದ್ದಾರಂತೆ ಸಚಿವ ಅಶೋಕ್. ಸಾರ್ ನೋಡಿ ನಮ್ಮ ಮನೆಗೆ ನೀರು ನುಗ್ಗಿದೆ ಅಂತಾ ಸ್ಥಳೀಯರು ದೂರಿದಾಗ.. ಸಚಿವರು ಸಿಎಂ ಮನೆಗೆ ಹೋಗಿ ಮತ್ತೆ ಬರ್ತೀನಿ ಅಂತಾ ಹೇಳಿ ಕಾರ್ ಹತ್ತಿ ಹೊರಟೇ ಬಿಟ್ಟರಂತೆ!

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ