AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ‘ನಮ್ಮ ಏರಿಯಾ’ಗೆ ಬರುತ್ತಾ? ಮಳೆ ಸಂಕಷ್ಟದಲ್ಲೂ ‘ಸಾಮ್ರಾಟ್​’ರಿಗೆ ವ್ಯಾಪ್ತಿ ಗೊಂದಲ!

ಬೆಂಗಳೂರು: ರಾತ್ರಿ ಸುರಿದ ಮಳೆಗೆ ಹೊಸಕೆರೆ ಹಳ್ಳಿ ಮತ್ತು ದತ್ತಾತ್ರೇಯ ಲೇಔಟ್​ನಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಸಿಎಂ ಭೇಟಿ ಮಾಡಲಿರುವ ಸಚಿವ ಅಶೋಕ್ ಸಿಎಂಗೆ ಮಳೆ ಹಾನಿ ಪ್ರದೇಶಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾಹಿತಿ ನೀಡಿ, ಪರಿಹಾರ ಕ್ರಮದ ಬಗ್ಗೆ ಅಶೋಕ್ ಚರ್ಚೆ ನಡೆಸಲಿದ್ದಾರೆ. ಇಂಟರೆಸ್ಟಿಂಗ್​ ಸುದ್ದಿಯೆಂದರೆ ಸಚಿವರು ಭೇಟಿ ಕೊಟ್ಟ ವೇಳ ಕೊಂಚ ಕನ್ಫ್ಯೂಸ್​ ಆಗಿಹೋದರು. ಇದು ನಮ್ಮ […]

ಇದು ‘ನಮ್ಮ ಏರಿಯಾ’ಗೆ ಬರುತ್ತಾ? ಮಳೆ ಸಂಕಷ್ಟದಲ್ಲೂ ‘ಸಾಮ್ರಾಟ್​’ರಿಗೆ ವ್ಯಾಪ್ತಿ ಗೊಂದಲ!
KUSHAL V
| Edited By: |

Updated on: Oct 24, 2020 | 12:12 PM

Share

ಬೆಂಗಳೂರು: ರಾತ್ರಿ ಸುರಿದ ಮಳೆಗೆ ಹೊಸಕೆರೆ ಹಳ್ಳಿ ಮತ್ತು ದತ್ತಾತ್ರೇಯ ಲೇಔಟ್​ನಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಸಿಎಂ ಭೇಟಿ ಮಾಡಲಿರುವ ಸಚಿವ ಅಶೋಕ್ ಸಿಎಂಗೆ ಮಳೆ ಹಾನಿ ಪ್ರದೇಶಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾಹಿತಿ ನೀಡಿ, ಪರಿಹಾರ ಕ್ರಮದ ಬಗ್ಗೆ ಅಶೋಕ್ ಚರ್ಚೆ ನಡೆಸಲಿದ್ದಾರೆ.

ಇಂಟರೆಸ್ಟಿಂಗ್​ ಸುದ್ದಿಯೆಂದರೆ ಸಚಿವರು ಭೇಟಿ ಕೊಟ್ಟ ವೇಳ ಕೊಂಚ ಕನ್ಫ್ಯೂಸ್​ ಆಗಿಹೋದರು. ಇದು ನಮ್ಮ ಏರಿಯಾಗೆ ಬರುತ್ತಾ ಅಥವಾ RR ನಗರಕ್ಕೆ ಸೇರುತ್ತಾ ಅಂತಾ ಸ್ಥಳೀಯ ಮಾಜಿ ಕಾರ್ಪೋರೇಟರ್ ಪತಿ ರಾಜೇಶ್ವರಿ ಚೋಳರಾಜ ಬಳಿ ಅಶೋಕ್​ ಪ್ರಶ್ನೆ ಮಾಡಿದರಂತೆ.

ಅದಕ್ಕೆ ಮಾಜಿ ಕಾರ್ಪೋರೇಟರ್ ಪತಿ ಇದು ನಮ್ಮ ಏರಿಯಾನೆ ಸಾರ್ ಅಂತಾ ಸಚಿವರಿಗೆ ಕನ್ಫರ್ಮ್​ ಮಾಹಿತಿ ಕೊಟ್ಟರಂತೆ. ಜೊತೆಗೆ, ಬೆಳಗ್ಗೆಯಿಂದ ಊಟ ಕೊಟ್ಟಿದ್ದೀವಿ, ನೀರು ಕೊಟ್ಟಿದ್ದೀ ಅಂತಾ ಮಾಹಿತಿ ಸಹ ಹೇಳಿದರಂತೆ.

ಅದೇ ವೇಳೆ, ಸಾರ್ ನಮ್ಮ ಮನೆ ನೋಡಿ ಅಂತಾ ಕೆಲ ಹಿರಿಯರು ಸಚಿವ ಆರ್ ಅಶೋಕ್​ಗೆ ಕೇಳಿಕೊಂಡರು. ಆಗ, ಕಾಂಪೌಂಡ್ ಹೊರ ಭಾಗದಿಂದಲೇ ಸಚಿವರು ನೋಡಿ ಹೊರಟು ಹೋದರು. ಈ ನಡುವೆ, ಅಕ್ಕಪಕ್ಕದ ಮನೆಯವರು ಸಾರ್ ಸಾರ್ ಅಂತಾ ಕೂಗಾಡಿದ್ರು ಸಚಿವರು ಜಾಣ ಕಿವುಡುತನ ತೋರಿ ಅಲ್ಲಿಂದ ಕಾಲ್ಕಿತ್ತರು.

ಯಾವುದೇ ಮನೆಯ ಒಳಗೆ ಹೋಗದೆ ಕೇವಲ ರೋಡ್ ಮಾತ್ರ ವೀಕ್ಷಣೆ ಮಾಡ್ತಿದ್ದಾರಂತೆ ಸಚಿವ ಅಶೋಕ್. ಸಾರ್ ನೋಡಿ ನಮ್ಮ ಮನೆಗೆ ನೀರು ನುಗ್ಗಿದೆ ಅಂತಾ ಸ್ಥಳೀಯರು ದೂರಿದಾಗ.. ಸಚಿವರು ಸಿಎಂ ಮನೆಗೆ ಹೋಗಿ ಮತ್ತೆ ಬರ್ತೀನಿ ಅಂತಾ ಹೇಳಿ ಕಾರ್ ಹತ್ತಿ ಹೊರಟೇ ಬಿಟ್ಟರಂತೆ!

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ