AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ‘ನಮ್ಮ ಏರಿಯಾ’ಗೆ ಬರುತ್ತಾ? ಮಳೆ ಸಂಕಷ್ಟದಲ್ಲೂ ‘ಸಾಮ್ರಾಟ್​’ರಿಗೆ ವ್ಯಾಪ್ತಿ ಗೊಂದಲ!

ಬೆಂಗಳೂರು: ರಾತ್ರಿ ಸುರಿದ ಮಳೆಗೆ ಹೊಸಕೆರೆ ಹಳ್ಳಿ ಮತ್ತು ದತ್ತಾತ್ರೇಯ ಲೇಔಟ್​ನಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಸಿಎಂ ಭೇಟಿ ಮಾಡಲಿರುವ ಸಚಿವ ಅಶೋಕ್ ಸಿಎಂಗೆ ಮಳೆ ಹಾನಿ ಪ್ರದೇಶಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾಹಿತಿ ನೀಡಿ, ಪರಿಹಾರ ಕ್ರಮದ ಬಗ್ಗೆ ಅಶೋಕ್ ಚರ್ಚೆ ನಡೆಸಲಿದ್ದಾರೆ. ಇಂಟರೆಸ್ಟಿಂಗ್​ ಸುದ್ದಿಯೆಂದರೆ ಸಚಿವರು ಭೇಟಿ ಕೊಟ್ಟ ವೇಳ ಕೊಂಚ ಕನ್ಫ್ಯೂಸ್​ ಆಗಿಹೋದರು. ಇದು ನಮ್ಮ […]

ಇದು ‘ನಮ್ಮ ಏರಿಯಾ’ಗೆ ಬರುತ್ತಾ? ಮಳೆ ಸಂಕಷ್ಟದಲ್ಲೂ ‘ಸಾಮ್ರಾಟ್​’ರಿಗೆ ವ್ಯಾಪ್ತಿ ಗೊಂದಲ!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 24, 2020 | 12:12 PM

Share

ಬೆಂಗಳೂರು: ರಾತ್ರಿ ಸುರಿದ ಮಳೆಗೆ ಹೊಸಕೆರೆ ಹಳ್ಳಿ ಮತ್ತು ದತ್ತಾತ್ರೇಯ ಲೇಔಟ್​ನಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಸಿಎಂ ಭೇಟಿ ಮಾಡಲಿರುವ ಸಚಿವ ಅಶೋಕ್ ಸಿಎಂಗೆ ಮಳೆ ಹಾನಿ ಪ್ರದೇಶಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಾಹಿತಿ ನೀಡಿ, ಪರಿಹಾರ ಕ್ರಮದ ಬಗ್ಗೆ ಅಶೋಕ್ ಚರ್ಚೆ ನಡೆಸಲಿದ್ದಾರೆ.

ಇಂಟರೆಸ್ಟಿಂಗ್​ ಸುದ್ದಿಯೆಂದರೆ ಸಚಿವರು ಭೇಟಿ ಕೊಟ್ಟ ವೇಳ ಕೊಂಚ ಕನ್ಫ್ಯೂಸ್​ ಆಗಿಹೋದರು. ಇದು ನಮ್ಮ ಏರಿಯಾಗೆ ಬರುತ್ತಾ ಅಥವಾ RR ನಗರಕ್ಕೆ ಸೇರುತ್ತಾ ಅಂತಾ ಸ್ಥಳೀಯ ಮಾಜಿ ಕಾರ್ಪೋರೇಟರ್ ಪತಿ ರಾಜೇಶ್ವರಿ ಚೋಳರಾಜ ಬಳಿ ಅಶೋಕ್​ ಪ್ರಶ್ನೆ ಮಾಡಿದರಂತೆ.

ಅದಕ್ಕೆ ಮಾಜಿ ಕಾರ್ಪೋರೇಟರ್ ಪತಿ ಇದು ನಮ್ಮ ಏರಿಯಾನೆ ಸಾರ್ ಅಂತಾ ಸಚಿವರಿಗೆ ಕನ್ಫರ್ಮ್​ ಮಾಹಿತಿ ಕೊಟ್ಟರಂತೆ. ಜೊತೆಗೆ, ಬೆಳಗ್ಗೆಯಿಂದ ಊಟ ಕೊಟ್ಟಿದ್ದೀವಿ, ನೀರು ಕೊಟ್ಟಿದ್ದೀ ಅಂತಾ ಮಾಹಿತಿ ಸಹ ಹೇಳಿದರಂತೆ.

ಅದೇ ವೇಳೆ, ಸಾರ್ ನಮ್ಮ ಮನೆ ನೋಡಿ ಅಂತಾ ಕೆಲ ಹಿರಿಯರು ಸಚಿವ ಆರ್ ಅಶೋಕ್​ಗೆ ಕೇಳಿಕೊಂಡರು. ಆಗ, ಕಾಂಪೌಂಡ್ ಹೊರ ಭಾಗದಿಂದಲೇ ಸಚಿವರು ನೋಡಿ ಹೊರಟು ಹೋದರು. ಈ ನಡುವೆ, ಅಕ್ಕಪಕ್ಕದ ಮನೆಯವರು ಸಾರ್ ಸಾರ್ ಅಂತಾ ಕೂಗಾಡಿದ್ರು ಸಚಿವರು ಜಾಣ ಕಿವುಡುತನ ತೋರಿ ಅಲ್ಲಿಂದ ಕಾಲ್ಕಿತ್ತರು.

ಯಾವುದೇ ಮನೆಯ ಒಳಗೆ ಹೋಗದೆ ಕೇವಲ ರೋಡ್ ಮಾತ್ರ ವೀಕ್ಷಣೆ ಮಾಡ್ತಿದ್ದಾರಂತೆ ಸಚಿವ ಅಶೋಕ್. ಸಾರ್ ನೋಡಿ ನಮ್ಮ ಮನೆಗೆ ನೀರು ನುಗ್ಗಿದೆ ಅಂತಾ ಸ್ಥಳೀಯರು ದೂರಿದಾಗ.. ಸಚಿವರು ಸಿಎಂ ಮನೆಗೆ ಹೋಗಿ ಮತ್ತೆ ಬರ್ತೀನಿ ಅಂತಾ ಹೇಳಿ ಕಾರ್ ಹತ್ತಿ ಹೊರಟೇ ಬಿಟ್ಟರಂತೆ!

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!