‘ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ.. ಗೊತ್ತಾ ನಿಮಗೆಲ್ಲ?’

ತುಮಕೂರು: ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ ಗೊತ್ತಾ ನಿಮಗೆಲ್ಲ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭೆ ಉಪಚುನಾವಣೆ ವೇಳೆ ಕ್ಷೇತ್ರದ ಕಳ್ಳಂಬೆಳ್ಳದಲ್ಲಿ ಪ್ರಚಾರದ ವೇಳೆ ಸಿದ್ದರಾಮಯ್ಯ ಹೀಗೆ ಮತದಾರರಿಗೆ ಪ್ರಶ್ನೆ ಹಾಕಿದರು. ಅಶೋಕ್ ಮೇಲೂ ಕ್ರಿಮಿನಲ್ ಕೇಸ್ ಇರಬೇಕಲ್ಲ ಗೊತ್ತಾ? ಹಿಂದೆ ಅವರು ನೆಂಟರಿಷ್ಟರಿಗೆಲ್ಲ ಜಮೀನು ಹಂಚಿಬಿಟ್ಟಿದ್ದ. ಆ ಕೇಸ್ ಇನ್ನೂ ಇದೆ ಅಶೋಕ್ ಮೇಲೆ. ಬೇಲ್ ತಗೊಂಡು ಓಡಾಡ್ತಿರೋ ಅಶೋಕಂಗೆ ನಮ್ಮ ಅಧ್ಯಕ್ಷರ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ? ಡಿಕೆ ಶಿವಕುಮಾರ್ […]

‘ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ.. ಗೊತ್ತಾ ನಿಮಗೆಲ್ಲ?’
ಸಾಧು ಶ್ರೀನಾಥ್​

Updated on: Oct 29, 2020 | 6:18 PM

ತುಮಕೂರು: ಅಶೋಕ್ ಇದಾನಲ್ಲ ಅವನು ಬೇಲ್ ಮೇಲಿದಾನೆ ಗೊತ್ತಾ ನಿಮಗೆಲ್ಲ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭೆ ಉಪಚುನಾವಣೆ ವೇಳೆ ಕ್ಷೇತ್ರದ ಕಳ್ಳಂಬೆಳ್ಳದಲ್ಲಿ ಪ್ರಚಾರದ ವೇಳೆ ಸಿದ್ದರಾಮಯ್ಯ ಹೀಗೆ ಮತದಾರರಿಗೆ ಪ್ರಶ್ನೆ ಹಾಕಿದರು.

ಅಶೋಕ್ ಮೇಲೂ ಕ್ರಿಮಿನಲ್ ಕೇಸ್ ಇರಬೇಕಲ್ಲ ಗೊತ್ತಾ? ಹಿಂದೆ ಅವರು ನೆಂಟರಿಷ್ಟರಿಗೆಲ್ಲ ಜಮೀನು ಹಂಚಿಬಿಟ್ಟಿದ್ದ. ಆ ಕೇಸ್ ಇನ್ನೂ ಇದೆ ಅಶೋಕ್ ಮೇಲೆ.

ಬೇಲ್ ತಗೊಂಡು ಓಡಾಡ್ತಿರೋ ಅಶೋಕಂಗೆ ನಮ್ಮ ಅಧ್ಯಕ್ಷರ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ? ಡಿಕೆ ಶಿವಕುಮಾರ್ ಬಗ್ಗೆ ಮಾತಾಡೋ ನೈತಿಕತೆ ಅಶೋಕ್ ಗಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ  ಕಾರ್ಯದಲ್ಲಿ ತೊಡಗಿದ್ದರು. ಚಿಕ್ಕದಾಸರಹಳ್ಳಿ, ಜಡಿಗೇನಹಳ್ಳಿ, ಪಾಲೇನಹಳ್ಳಿ, ಕಳ್ಳಂಬೆಳ್ಳ, ತರೂರು, ತಾಳಗುಂದದಲ್ಲಿ ಸಿದ್ದರಾಮಯ್ಯ ಪ್ರಚಾರ ಮುಗಿಸಿದರು. ಪ್ರಚಾರದಲ್ಲಿ ಅಭ್ಯರ್ಥಿ ಟಿಬಿ ಜಯಚಂದ್ರ, ದಿನೇಶ್ ಗುಂಡೂರಾವ್, ಎಂಬಿ ಪಾಟೀಲ್, ಮುದ್ದಹನುಮೇಗೌಡ ಭಾಗಿಯಾಗಿದ್ದರು.

Published On - 5:05 pm, Thu, 29 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us