ಕೊರೊನಾ ಮುಕ್ತ ಮೈಸೂರು: ನಾಡದೇವತೆ ಆಶೀರ್ವಾದ ಪಡೆದ ಸಂಸದ, ಸಚಿವರು

ಸಾಧು ಶ್ರೀನಾಥ್​

|

Updated on:May 16, 2020 | 11:15 AM

ಮೈಸೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಸಮಾಧಾನಕರ ಸಂಗತಿಯೆಂದರೆ ಮೈಸೂರು ಇದೀಗ ಗ್ರೀನ್​ ಜೋನ್​ಗೆ ಬಂದಿದೆ. ಹೌದು, ಜಿಲ್ಲೆಯಲ್ಲಿದ್ದ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ ಮುಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ S.T.ಸೋಮಶೇಖರ್ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ನಾಡದೇವತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಕೊರೊನಾ ಸಂಕಷ್ಟದಿಂದ ನಿವಾರಿಸುವಂತೆ ದೇವಸ್ಥಾನದ ಹೊರಭಾಗದಲ್ಲೇ ನಿಂತು ಸೋಮಶೇಖರ್ ಪ್ರಾರ್ಥಿಸಿದ್ದಾರೆ. ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ […]

ಕೊರೊನಾ ಮುಕ್ತ ಮೈಸೂರು: ನಾಡದೇವತೆ ಆಶೀರ್ವಾದ ಪಡೆದ ಸಂಸದ, ಸಚಿವರು

ಮೈಸೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಸಮಾಧಾನಕರ ಸಂಗತಿಯೆಂದರೆ ಮೈಸೂರು ಇದೀಗ ಗ್ರೀನ್​ ಜೋನ್​ಗೆ ಬಂದಿದೆ. ಹೌದು, ಜಿಲ್ಲೆಯಲ್ಲಿದ್ದ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾದಿಂದ ಮುಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ S.T.ಸೋಮಶೇಖರ್ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ನಾಡದೇವತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಕೊರೊನಾ ಸಂಕಷ್ಟದಿಂದ ನಿವಾರಿಸುವಂತೆ ದೇವಸ್ಥಾನದ ಹೊರಭಾಗದಲ್ಲೇ ನಿಂತು ಸೋಮಶೇಖರ್ ಪ್ರಾರ್ಥಿಸಿದ್ದಾರೆ.

ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ರಾಮದಾಸ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada