AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯ ಮನೆಗೇ ತೆರಳಿ ಆತ್ಮವಿಶ್ವಾಸ ಹೆಚ್ಚಿಸಿದ ಸಚಿವ ಸುರೇಶ್ ಕುಮಾರ್

ಜನವರಿ 25ರಂದು ವಿದ್ಯಾರ್ಥಿನಿ ಯಶಸ್ವಿನಿ ರಾಷ್ಟ್ರೀಯ ಮಟ್ಟದ ಪ್ರತಿಭಾ ಅನ್ವೇಷಣಾ ಪರೀಕ್ಷೆಗೆ ಹಾಜರಾಗಲು ತಂದೆಯೊಂದಿಗೆ ಹೋಗುತ್ತಿದ್ದಾಗ ಕೆಂಗೇರಿ ಬಳಿ ದೊಡ್ಡಮಟ್ಟದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಕತ್ತಿನ ಬೆನ್ನುಮೂಳೆ ಮತ್ತು ಬಲಗೈಗೆ ತೀವ್ರವಾಗಿ ಘಾಸಿಯಾಗಿತ್ತು. ಬಳಿಕ ಯಶಸ್ವಿನಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿತ್ತು.

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯ ಮನೆಗೇ ತೆರಳಿ ಆತ್ಮವಿಶ್ವಾಸ ಹೆಚ್ಚಿಸಿದ ಸಚಿವ ಸುರೇಶ್ ಕುಮಾರ್
ವಿದ್ಯಾರ್ಥಿನಿ ಯಶಸ್ವಿನಿ ನಿವಾಸಕ್ಕೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ.
ಆಯೇಷಾ ಬಾನು
| Edited By: |

Updated on: Feb 25, 2021 | 10:38 AM

Share

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಘಾಸಿಗೊಳಗಾಗಿರುವ ವಿದ್ಯಾರ್ಥಿಯ ಮನೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕುಂಬಳಗೂಡಿನಲ್ಲಿರುವ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಯಶಸ್ವಿನಿ ನಿವಾಸಕ್ಕೆ ಇಂದು ಬೆಳಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಜನವರಿ 25ರಂದು ವಿದ್ಯಾರ್ಥಿನಿ ಯಶಸ್ವಿನಿ ರಾಷ್ಟ್ರೀಯ ಮಟ್ಟದ ಪ್ರತಿಭಾ ಅನ್ವೇಷಣಾ ಪರೀಕ್ಷೆಗೆ ಹಾಜರಾಗಲು ತಂದೆಯೊಂದಿಗೆ ಹೋಗುತ್ತಿದ್ದಾಗ ಕೆಂಗೇರಿ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಕತ್ತಿನ ಬೆನ್ನುಮೂಳೆ ಮತ್ತು ಬಲಗೈಗೆ ತೀವ್ರವಾಗಿ ಘಾಸಿಯಾಗಿತ್ತು. ಬಳಿಕ ಯಶಸ್ವಿನಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿತ್ತು. ಸದ್ಯ ಯಶಸ್ವಿನಿ ಕೊಂಚ ಕೊಂಚ ಚೇತರಿಸಿಕೊಂಡಿದ್ದು ತನ್ನ ಕತ್ತು ತಿರುಗಿಸಲು ಇನ್ನೂ ಸುಮಾರು 3 ವಾರಗಳು ಬೇಕಿದೆ. ಬಲಗೈ ಎತ್ತಲು ಸಹ ಪ್ರಯತ್ನಿಸುತ್ತಿದ್ದಾರೆ. ಚಿಕಿತ್ಸೆಯ ಬಳಿಕ ವಿದ್ಯಾರ್ಥಿನಿಯು ತನ್ನ ನಿವಾಸಕ್ಕೆ ವಾಪಸಾಗಿದ್ದಾಳೆ. ಹಾಗಾಗಿ, ಸಚಿವ ಸುರೇಶ್ ಕುಮಾರ್ ಇಂದು ಯಶಸ್ವಿನಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು ಶಿಕ್ಷಣ ಇಲಾಖೆಯಿಂದ ಆಕೆಯ ಶಸ್ತ್ರಚಿಕಿತ್ಸೆಗೆ ಅಗತ್ಯ ಹಣ ಪಾವತಿ ಮಾಡಲಾಗಿದೆ. ಈಗ ಯಶಸ್ವಿನಿ ಮುಂಬರುವ SSLC ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುತ್ತೇನೆ ಎಂದು ಹೇಳಿದ್ದಾಳೆ. ಇಂದು ನಾನು ಆಕೆಯ ಮನೆಗೆ ಹೋಗಿ ಆಕೆಯನ್ನು ಮಾತನಾಡಿಸಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಪ್ರಯತ್ನ ಮಾಡಿದ್ದೇನೆ. ಈ ಬಾಲಕಿಗೆ ಇನ್ಮುಂದೆ ಕಲಿಕೆಗೆ ಎಲ್ಲ ವ್ಯವಸ್ಥೆ ಮಾಡಲಾಗುವುದು. ಪೂರ್ಣ ಗುಣಮುಖವಾಗುವವರೆಗೆ ಮನೆಗೆ ಶಾಲಾ ಶಿಕ್ಷಕರು ಪಾಠ ಹೇಳಿಕೊಡುವ ವ್ಯವಸ್ಥೆ ಮಾಡಲಾಗಿದೆ. ತಾನು SSLC ಪರೀಕ್ಷೆ ಪಡೆದು ನನ್ನಿಂದಲೇ ಬಹುಮಾನ ಸ್ವೀಕರಿಸುತ್ತೇನೆ ಎಂಬ ಆತ್ಮವಿಶ್ವಾಸದ ಮಾತುಗಳನ್ನು ಯಶಸ್ವಿನಿ ಹೇಳಿದ್ದಾರೆ. ಎಲ್ಲ ರೀತಿಯಲ್ಲೂ ಶುಭವಾಗಲಿ ಎಂದು ಹಾರೈಸಿ ಬಂದಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

Suresh kumar Visits Student house

ವಿದ್ಯಾರ್ಥಿನಿ ಯಶಸ್ವಿನಿ ನಿವಾಸಕ್ಕೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: School Reopen: ಫೆ. 22ರಿಂದ 6-8 ತರಗತಿಗಳಿಗೆ ಪೂರ್ಣ ಶಾಲೆ ಆರಂಭ -ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ