ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು […]

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR
ಸಾಧು ಶ್ರೀನಾಥ್​ Edited By:

Updated on: Nov 07, 2020 | 11:30 AM

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಏನಿದು ಪ್ರಕರಣ?
ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು 16 ವರ್ಷದ ಅಪ್ರಾಪ್ತೆಗೆ ಲಾಠಿಯಿಂದ ಹೊಡೆದರು ಎಂಬ ಆರೋಪ ಕೇಳಿಬಂದಿದೆ. ಸದ್ಯ, ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೊತೆಗೆ, CWC ತಂಡದವರು ಬಾಲಕಿಯಿಂದ ಹೇಳಿಕೆ ಸಹ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On - 11:09 am, Sat, 7 November 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us