
ರಾಯಚೂರು: ನಗರದಲ್ಲಿ ಕಳೆದ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದೆ. ನಗರದ ಲಕ್ಷಮ್ಮ ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ಈ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ. ಅನೇಕ ಬೈಕ್ಗಳನ್ನು ರಾಜಕಾಲುವೆಗೆ ಹಾಕಿದ್ದಾರೆ.
ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ನೇತಾಜಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.