ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ಯುವಕನಿಗೆ ಚಾಕು ಇರಿದು ಬೈಕ್ ಕಳ್ಳತನ!

ದೇವನಹಳ್ಳಿ: ನೀರು ಕೇಳುವ ನೆಪದಲ್ಲಿ ಮನೆಗೆ ಬಂದವರು ಯುವಕನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ ( 22 ) ಕೊಲೆಯಾದ ಯುವಕ. ದೊಡ್ಡಬಳ್ಳಾಪುರ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ 207 ರ ಬದಿಯಲ್ಲಿರೂ ಮನೆಗೆ ಕಳೆದ ರಾತ್ರಿ ನಮ್ಮ ಗಾಡಿ ಆಕ್ಸಿಡೆಂಟ್ ಆಗಿದೆ ನೀರು ಕೊಡಿ ಅಂತ ನೀರು ಕೇಳುವ ನೆಪದಲ್ಲಿ ಮನೆಗೆ ಒರ್ವ ದುಷ್ಕರ್ಮಿ ಬಂದಿದ್ದಾನೆ. ಈ ವೇಳೆ ನೀರು ಕೊಡಲು ಬಾಗಿಲು ತೆಗೆದಾಗ […]

ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ಯುವಕನಿಗೆ ಚಾಕು ಇರಿದು ಬೈಕ್ ಕಳ್ಳತನ!
ಆಯೇಷಾ ಬಾನು

Updated on: Aug 16, 2020 | 9:24 AM

ದೇವನಹಳ್ಳಿ: ನೀರು ಕೇಳುವ ನೆಪದಲ್ಲಿ ಮನೆಗೆ ಬಂದವರು ಯುವಕನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ ( 22 ) ಕೊಲೆಯಾದ ಯುವಕ.

ದೊಡ್ಡಬಳ್ಳಾಪುರ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ 207 ರ ಬದಿಯಲ್ಲಿರೂ ಮನೆಗೆ ಕಳೆದ ರಾತ್ರಿ ನಮ್ಮ ಗಾಡಿ ಆಕ್ಸಿಡೆಂಟ್ ಆಗಿದೆ ನೀರು ಕೊಡಿ ಅಂತ ನೀರು ಕೇಳುವ ನೆಪದಲ್ಲಿ ಮನೆಗೆ ಒರ್ವ ದುಷ್ಕರ್ಮಿ ಬಂದಿದ್ದಾನೆ. ಈ ವೇಳೆ ನೀರು ಕೊಡಲು ಬಾಗಿಲು ತೆಗೆದಾಗ ಮನೆಗೆ ಐವರು ದುಷ್ಕರ್ಮಿಗಳು ನುಗ್ಗಿದ್ದಾರೆ.

ಯುವಕನ ಕೊಲೆ ಮಾಡಿ ನಂತರ ಮನೆಯಲ್ಲಿದ್ದ ಬೈಕ್ ಕೊಂಡೊಯ್ದಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us