AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ. ಕಳೆದ 50 ವರ್ಷಗಳಿಂದ ನಾವು ಆ […]

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Guru
Guru| Edited By: ಸಾಧು ಶ್ರೀನಾಥ್​|

Updated on:Aug 12, 2020 | 6:20 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ.

ಕಳೆದ 50 ವರ್ಷಗಳಿಂದ ನಾವು ಆ ಮನೆಯಲ್ಲಿ ಇದ್ದೆವು. 50 ವರ್ಷದ ಇತಿಹಾಸದ ಮನೆಯಲ್ಲಿ ನಡೆದ ಈ ಘಟನೆಯಿಂದ ನನಗೆ ಭಾರೀ ದುಃಖವಾಗಿದೆ. ಕಳೆದ10 ವರ್ಷಗಳಿಂದ ನವೀನ್​ಗೂ ನಮಗೂ ಸಂಬಂಧವಿಲ್ಲ. 10 ವರ್ಷಗಳಿಂದ ನವೀನ್​ನನ್ನು ನಾವು ಹತ್ತಿರಕ್ಕೆ ಸೇರಿಸುತ್ತಿರಲಿಲ್ಲ ಎಂದು ಆರೋಪಿ ನವೀನ್‌ ಬಗ್ಗೆ ಅಖಂಡ ಅಸಮಾಧಾನ ಹೊರಹಾಕಿದ್ದಾರೆ.

ಪ್ರಮುಖ ಆರೋಪಿ ಮುಜಾಮಿಲ್​ನನ್ನು ನಾನು ನೋಡಿಲ್ಲ. ಘಟನೆಯಿಂದ ನಾನು ನೊಂದಿದ್ದೇನೆ. ನಮಗೂ ಮತ್ತು ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಈ ಸಂಬಂಧ ನಾನು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ. ನನಗೆ ಆಗಿರುವಂತೆ ಬೇರೆ ಯಾವ ಶಾಸಕರಿಗೂ ಆಗಬಾರದು. ರಾಜ್ಯದ ಎಲ್ಲ ಶಾಸಕರಿಗೂ ರಕ್ಷಣೆ ಕೊಡಲು ಮನವಿ ಮಾಡುತ್ತೇನೆ ಎಂದು ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಈ ಗಲಾಟೆ ತಣ್ಣಗಾದ ಬಳಿಕ ಎಲ್ಲ ಧರ್ಮಗಳು ಪ್ರಮುಖ ಗುರುಗಳನ್ನು ಕರೆಸಿ ಶಾಂತಿ ಸಭೆ ಮಾಡುತ್ತೇವೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಇದರಿಂದ ಸಮಾಜನದ ಸ್ವಾಸ್ಥ್ಯ ಕೆಡುತ್ತದೆ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

Published On - 6:20 pm, Wed, 12 August 20

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ