AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ. ಕಳೆದ 50 ವರ್ಷಗಳಿಂದ ನಾವು ಆ […]

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Guru
| Updated By: ಸಾಧು ಶ್ರೀನಾಥ್​|

Updated on:Aug 12, 2020 | 6:20 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ.

ಕಳೆದ 50 ವರ್ಷಗಳಿಂದ ನಾವು ಆ ಮನೆಯಲ್ಲಿ ಇದ್ದೆವು. 50 ವರ್ಷದ ಇತಿಹಾಸದ ಮನೆಯಲ್ಲಿ ನಡೆದ ಈ ಘಟನೆಯಿಂದ ನನಗೆ ಭಾರೀ ದುಃಖವಾಗಿದೆ. ಕಳೆದ10 ವರ್ಷಗಳಿಂದ ನವೀನ್​ಗೂ ನಮಗೂ ಸಂಬಂಧವಿಲ್ಲ. 10 ವರ್ಷಗಳಿಂದ ನವೀನ್​ನನ್ನು ನಾವು ಹತ್ತಿರಕ್ಕೆ ಸೇರಿಸುತ್ತಿರಲಿಲ್ಲ ಎಂದು ಆರೋಪಿ ನವೀನ್‌ ಬಗ್ಗೆ ಅಖಂಡ ಅಸಮಾಧಾನ ಹೊರಹಾಕಿದ್ದಾರೆ.

ಪ್ರಮುಖ ಆರೋಪಿ ಮುಜಾಮಿಲ್​ನನ್ನು ನಾನು ನೋಡಿಲ್ಲ. ಘಟನೆಯಿಂದ ನಾನು ನೊಂದಿದ್ದೇನೆ. ನಮಗೂ ಮತ್ತು ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಈ ಸಂಬಂಧ ನಾನು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ. ನನಗೆ ಆಗಿರುವಂತೆ ಬೇರೆ ಯಾವ ಶಾಸಕರಿಗೂ ಆಗಬಾರದು. ರಾಜ್ಯದ ಎಲ್ಲ ಶಾಸಕರಿಗೂ ರಕ್ಷಣೆ ಕೊಡಲು ಮನವಿ ಮಾಡುತ್ತೇನೆ ಎಂದು ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಈ ಗಲಾಟೆ ತಣ್ಣಗಾದ ಬಳಿಕ ಎಲ್ಲ ಧರ್ಮಗಳು ಪ್ರಮುಖ ಗುರುಗಳನ್ನು ಕರೆಸಿ ಶಾಂತಿ ಸಭೆ ಮಾಡುತ್ತೇವೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಇದರಿಂದ ಸಮಾಜನದ ಸ್ವಾಸ್ಥ್ಯ ಕೆಡುತ್ತದೆ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

Published On - 6:20 pm, Wed, 12 August 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ