AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ. ಕಳೆದ 50 ವರ್ಷಗಳಿಂದ ನಾವು ಆ […]

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Guru
Guru| Edited By: ಸಾಧು ಶ್ರೀನಾಥ್​|

Updated on:Aug 12, 2020 | 6:20 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ.

ಕಳೆದ 50 ವರ್ಷಗಳಿಂದ ನಾವು ಆ ಮನೆಯಲ್ಲಿ ಇದ್ದೆವು. 50 ವರ್ಷದ ಇತಿಹಾಸದ ಮನೆಯಲ್ಲಿ ನಡೆದ ಈ ಘಟನೆಯಿಂದ ನನಗೆ ಭಾರೀ ದುಃಖವಾಗಿದೆ. ಕಳೆದ10 ವರ್ಷಗಳಿಂದ ನವೀನ್​ಗೂ ನಮಗೂ ಸಂಬಂಧವಿಲ್ಲ. 10 ವರ್ಷಗಳಿಂದ ನವೀನ್​ನನ್ನು ನಾವು ಹತ್ತಿರಕ್ಕೆ ಸೇರಿಸುತ್ತಿರಲಿಲ್ಲ ಎಂದು ಆರೋಪಿ ನವೀನ್‌ ಬಗ್ಗೆ ಅಖಂಡ ಅಸಮಾಧಾನ ಹೊರಹಾಕಿದ್ದಾರೆ.

ಪ್ರಮುಖ ಆರೋಪಿ ಮುಜಾಮಿಲ್​ನನ್ನು ನಾನು ನೋಡಿಲ್ಲ. ಘಟನೆಯಿಂದ ನಾನು ನೊಂದಿದ್ದೇನೆ. ನಮಗೂ ಮತ್ತು ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಈ ಸಂಬಂಧ ನಾನು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ. ನನಗೆ ಆಗಿರುವಂತೆ ಬೇರೆ ಯಾವ ಶಾಸಕರಿಗೂ ಆಗಬಾರದು. ರಾಜ್ಯದ ಎಲ್ಲ ಶಾಸಕರಿಗೂ ರಕ್ಷಣೆ ಕೊಡಲು ಮನವಿ ಮಾಡುತ್ತೇನೆ ಎಂದು ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಈ ಗಲಾಟೆ ತಣ್ಣಗಾದ ಬಳಿಕ ಎಲ್ಲ ಧರ್ಮಗಳು ಪ್ರಮುಖ ಗುರುಗಳನ್ನು ಕರೆಸಿ ಶಾಂತಿ ಸಭೆ ಮಾಡುತ್ತೇವೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಇದರಿಂದ ಸಮಾಜನದ ಸ್ವಾಸ್ಥ್ಯ ಕೆಡುತ್ತದೆ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

Published On - 6:20 pm, Wed, 12 August 20

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ