AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ. ಕಳೆದ 50 ವರ್ಷಗಳಿಂದ ನಾವು ಆ […]

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Guru
Guru| Edited By: ಸಾಧು ಶ್ರೀನಾಥ್​|

Updated on:Aug 12, 2020 | 6:20 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ.

ಕಳೆದ 50 ವರ್ಷಗಳಿಂದ ನಾವು ಆ ಮನೆಯಲ್ಲಿ ಇದ್ದೆವು. 50 ವರ್ಷದ ಇತಿಹಾಸದ ಮನೆಯಲ್ಲಿ ನಡೆದ ಈ ಘಟನೆಯಿಂದ ನನಗೆ ಭಾರೀ ದುಃಖವಾಗಿದೆ. ಕಳೆದ10 ವರ್ಷಗಳಿಂದ ನವೀನ್​ಗೂ ನಮಗೂ ಸಂಬಂಧವಿಲ್ಲ. 10 ವರ್ಷಗಳಿಂದ ನವೀನ್​ನನ್ನು ನಾವು ಹತ್ತಿರಕ್ಕೆ ಸೇರಿಸುತ್ತಿರಲಿಲ್ಲ ಎಂದು ಆರೋಪಿ ನವೀನ್‌ ಬಗ್ಗೆ ಅಖಂಡ ಅಸಮಾಧಾನ ಹೊರಹಾಕಿದ್ದಾರೆ.

ಪ್ರಮುಖ ಆರೋಪಿ ಮುಜಾಮಿಲ್​ನನ್ನು ನಾನು ನೋಡಿಲ್ಲ. ಘಟನೆಯಿಂದ ನಾನು ನೊಂದಿದ್ದೇನೆ. ನಮಗೂ ಮತ್ತು ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಈ ಸಂಬಂಧ ನಾನು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ. ನನಗೆ ಆಗಿರುವಂತೆ ಬೇರೆ ಯಾವ ಶಾಸಕರಿಗೂ ಆಗಬಾರದು. ರಾಜ್ಯದ ಎಲ್ಲ ಶಾಸಕರಿಗೂ ರಕ್ಷಣೆ ಕೊಡಲು ಮನವಿ ಮಾಡುತ್ತೇನೆ ಎಂದು ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಈ ಗಲಾಟೆ ತಣ್ಣಗಾದ ಬಳಿಕ ಎಲ್ಲ ಧರ್ಮಗಳು ಪ್ರಮುಖ ಗುರುಗಳನ್ನು ಕರೆಸಿ ಶಾಂತಿ ಸಭೆ ಮಾಡುತ್ತೇವೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಇದರಿಂದ ಸಮಾಜನದ ಸ್ವಾಸ್ಥ್ಯ ಕೆಡುತ್ತದೆ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

Published On - 6:20 pm, Wed, 12 August 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು