AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ. ಕಳೆದ 50 ವರ್ಷಗಳಿಂದ ನಾವು ಆ […]

10 ವರ್ಷದಿಂದ ನವೀನ್​ನನ್ನು ನಾವು ಹತ್ತಿರಕ್ಕೇ ಸೇರಿಸಿಲ್ಲ: ಶಾಸಕ ಅಖಂಡ ಶ್ರೀನಿವಾಸಮೂರ್ತಿ
Guru
| Edited By: |

Updated on:Aug 12, 2020 | 6:20 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟಿವಿ9 ಜೊತೆ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಮ್ಮ ಮನೆಯಲ್ಲಿದ್ದ ಹಲವು ವಸ್ತುಗಳನ್ನು ದೋಚಿದ್ದಾರೆ. ಕೆಲವು ವಸ್ತುಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್​, ಲಾಂಗು, ಮಚ್ಚು ತಂದು ದಾಳಿ ಮಾಡಿದ್ದಾರೆ ಎಂದು ಪುಲಿಕೇಶಿನಗರ ಶಾಸಕ ತಮ್ಮ ನೋವು ತೋಡಿಕೊಂಡಿದ್ದಾರೆ.

ಕಳೆದ 50 ವರ್ಷಗಳಿಂದ ನಾವು ಆ ಮನೆಯಲ್ಲಿ ಇದ್ದೆವು. 50 ವರ್ಷದ ಇತಿಹಾಸದ ಮನೆಯಲ್ಲಿ ನಡೆದ ಈ ಘಟನೆಯಿಂದ ನನಗೆ ಭಾರೀ ದುಃಖವಾಗಿದೆ. ಕಳೆದ10 ವರ್ಷಗಳಿಂದ ನವೀನ್​ಗೂ ನಮಗೂ ಸಂಬಂಧವಿಲ್ಲ. 10 ವರ್ಷಗಳಿಂದ ನವೀನ್​ನನ್ನು ನಾವು ಹತ್ತಿರಕ್ಕೆ ಸೇರಿಸುತ್ತಿರಲಿಲ್ಲ ಎಂದು ಆರೋಪಿ ನವೀನ್‌ ಬಗ್ಗೆ ಅಖಂಡ ಅಸಮಾಧಾನ ಹೊರಹಾಕಿದ್ದಾರೆ.

ಪ್ರಮುಖ ಆರೋಪಿ ಮುಜಾಮಿಲ್​ನನ್ನು ನಾನು ನೋಡಿಲ್ಲ. ಘಟನೆಯಿಂದ ನಾನು ನೊಂದಿದ್ದೇನೆ. ನಮಗೂ ಮತ್ತು ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಈ ಸಂಬಂಧ ನಾನು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ. ನನಗೆ ಆಗಿರುವಂತೆ ಬೇರೆ ಯಾವ ಶಾಸಕರಿಗೂ ಆಗಬಾರದು. ರಾಜ್ಯದ ಎಲ್ಲ ಶಾಸಕರಿಗೂ ರಕ್ಷಣೆ ಕೊಡಲು ಮನವಿ ಮಾಡುತ್ತೇನೆ ಎಂದು ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಈ ಗಲಾಟೆ ತಣ್ಣಗಾದ ಬಳಿಕ ಎಲ್ಲ ಧರ್ಮಗಳು ಪ್ರಮುಖ ಗುರುಗಳನ್ನು ಕರೆಸಿ ಶಾಂತಿ ಸಭೆ ಮಾಡುತ್ತೇವೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಇದರಿಂದ ಸಮಾಜನದ ಸ್ವಾಸ್ಥ್ಯ ಕೆಡುತ್ತದೆ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

Published On - 6:20 pm, Wed, 12 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ