AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

ಯುವತಿ ಸ್ವಇಚ್ಛೆಯಿಂದ ಮಾತನಾಡಿದ್ದಾಳೋ ಅಥವಾ ಯಾರದ್ದೋ ಒತ್ತಾಯದಿಂದ ಮಾಡಿದ್ದಾರೋ ಗೊತ್ತಿಲ್ಲ. ಹಾಗಾಗಿ, ರೇಪ್ ಕೇಸ್ ಹಾಕಬೇಕು ಅಂತೆಲ್ಲ ಹೇಳೋದು ಸರಿಯಲ್ಲ. ಸಿದ್ದರಾಮಯ್ಯ ಈ ರೀತಿಯಾಗಿ ಹೇಳುವುದು ಸರಿಯಲ್ಲ. ದಯಮಾಡಿ ರೇಪ್​ ಅನ್ನೋ ಶಬ್ದ ಬಳಸಿಬೇಡಿ. ನಿಮಗೆ ಶೋಭೆ ತರಲ್ಲ. ಯುವತಿಗೆ ರಕ್ಷಣೆ ನೀಡಲು ಗೃಹ ಸಚಿವರು ಸಿದ್ಧರಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ
ಬಾಲಚಂದ್ರ ಜಾರಕಿಹೊಳಿ
KUSHAL V
| Updated By: ಸಾಧು ಶ್ರೀನಾಥ್​|

Updated on:Mar 23, 2021 | 5:34 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಸಿದ್ದರಾಮಯ್ಯನವರ ವಾದವನ್ನು ಒಪ್ಪುವುದಿಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಆ ಯುವತಿಯ 34 ಸೆಕೆಂಡ್​ನ ವಿಡಿಯೋ ಇಟ್ಟುಕೊಂಡು ರಮೇಶ್ ಮೇಲೆ ಕೇಸ್ ಹಾಕಬೇಕು ಅನ್ನೋದು ಒಪ್ಪಲ್ಲ. ಯುವತಿ ಸ್ವಇಚ್ಛೆಯಿಂದ ಮಾತನಾಡಿದ್ದಾಳೋ ಅಥವಾ ಯಾರದ್ದೋ ಒತ್ತಾಯದಿಂದ ಮಾಡಿದ್ದಾರೋ ಗೊತ್ತಿಲ್ಲ. ಹಾಗಾಗಿ, ರೇಪ್ ಕೇಸ್ ಹಾಕಬೇಕು ಅಂತೆಲ್ಲ ಹೇಳೋದು ಸರಿಯಲ್ಲ. ಸಿದ್ದರಾಮಯ್ಯ ಈ ರೀತಿಯಾಗಿ ಹೇಳುವುದು ಸರಿಯಲ್ಲ. ದಯಮಾಡಿ ರೇಪ್​ ಅನ್ನೋ ಶಬ್ದ ಬಳಸಬೇಡಿ. ನಿಮಗೆ ಶೋಭೆ ತರಲ್ಲ. ಯುವತಿಗೆ ರಕ್ಷಣೆ ನೀಡಲು ಗೃಹ ಸಚಿವರು ಸಿದ್ಧರಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು. ವಿಧಾನಸೌಧದಲ್ಲಿ ಕೆಂಗಲ್​ ಗೇಟ್​ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಾಲಚಂದ್ರ ಜಾರಕಿಹೊಳಿ ಈ ಮನವಿಯನ್ನು ಮುಂದಿಟ್ಟರು.

ನಿನ್ನೆ ಸದನದಲ್ಲಿದ್ದು ನಾನು ಮಾತನಾಡಬೇಕು ಅಂತಿದ್ದೆ. ಅದರೆ, ನಾನು ಸಿದ್ದರಾಮಯ್ಯನವರ ವಾದ ಒಪ್ಪೋದಿಲ್ಲ. ಆ ಯುವತಿಯ 34 ಸೆಕೆಂಡ್​ನ ವಿಡಿಯೋ ಇಟ್ಟುಕೊಂಡು ರಮೇಶ್ ಮೇಲೆ ಕೇಸ್ ಹಾಕಬೇಕು ಅನ್ನೋದು ಒಪ್ಪಲ್ಲ. ಆ ಯುವತಿ ಸ್ವಇಚ್ವೆಯಿಂದ ಮಾತನಾಡಿದ್ದಾಳೋ ಅಥ್ವಾ ಒತ್ತಾಯದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಶಾಸಕರು ಹೇಳಿದರು.

ಯುವತಿಯೇ ಬಂದು ದೂರು ನೀಡಲಿ; ತನಿಖೆಯಲ್ಲಿ ರಮೇಶ್ ತಪ್ಪಿತಸ್ಥರಾಗಿದ್ರೆ ಅವರಿಗೆ ಶಿಕ್ಷೆ ಸಿಗಲಿ ಯುವತಿ ಎಲ್ಲಿದ್ದಾಳೆ ಅನ್ನೋದು ಗೊತ್ತಿಲ್ಲ. ಬಲವಂತವಾಗಿ ಅವಳಿಂದ ವಿಡಿಯೋ ಮಾಡಿಸಿರಬಹುದಲ್ವಾ? ಆ ಯುವತಿಯೇ ಬಂದು ನೇರವಾಗಿ ದೂರು ನೀಡಲಿ. ತನಿಖೆಯಲ್ಲಿ ರಮೇಶ್ ಜಾರಕಿಹೊಳಿ ತಪ್ಪಿತಸ್ಥರಾಗಿದ್ರೆ ಅವರಿಗೆ ಶಿಕ್ಷೆ ಸಿಗಲಿ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಎಸ್​ಐಟಿಯವರು ತುಂಬಾ ಚೆನ್ನಾಗಿ ತನಿಖೆ ಮಾಡ್ತಿದ್ದಾರೆ. ಯುವತಿಯ ಪೋಷಕರ ಮನೆ ಬೆಳಗಾವಿಯ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲೇ ಬರುತ್ತದೆ. ಆದ್ದರಿಂದ, ಅವರು ಅಲ್ಲಿ ದೂರು ನೀಡಿದ್ದಾರೆ. ಒಂದು ಟೀಂ ಒತ್ತಾಯಪೂರ್ವಕವಾಗಿ ಯುವತಿಯನ್ನ ಮುಂದಿಟ್ಟುಕೊಂಡು ವಿಡಿಯೋ ಮಾಡಿದ್ದಾರೆ ಅನ್ನೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡ್ತಿದ್ದಾರೆ. ನಾನೂ ತನಿಖೆ ಆದಷ್ಟು ಬೇಗ ಮುಕ್ತಾಯವಾಗಲಿ ಅಂತಾ ಒತ್ತಾಯ ಮಾಡ್ತಿನಿ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ಹಾಕಬೇಕು; ಸಿಡಿ ಯುವತಿಗೆ ರಕ್ಷಣೆ ಕೊಡಬೇಕು -ಸಿದ್ದರಾಮಯ್ಯ

Published On - 5:28 pm, Tue, 23 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ